ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ; ಸಿಎಂ ಸಿದ್ದರಾಮಯ್ಯ ಅಸಮಾಧಾನ.

ಬೆಂಗಳೂರು : ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.


ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.

ವೇತನ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದರು. ನಮಗೆ 11495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

https://www.facebook.com/reel/643984295133776    ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜೊತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಟೀಕಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!