ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು.

ತಿರುವಳ್ಳೂರು : ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳ್ಳಿ ತಪ್ಪಿದ ಪರಿಣಾಮ, ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ.

ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ ಇದ್ದಕ್ಕಿದ್ದಂತೆ ಹಳಿತಪ್ಪಿದೆ. ಈ ವೇಳೆ ರೈಲಿನಲ್ಲಿದ್ದ ಡೀಸೆಲ್ ಟ್ಯಾಂಕರ್ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಗಧಗಿಸುತ್ತಿರುವ ಬೆಂಕಿಯ ಜ್ವಾಲೆಯ ಹಿನ್ನೆಲೆಯಲ್ಲಿ ಸುತ್ತಲೂ ದಟ್ಟ ಹೊಗೆ ಆವರಿಸಿಕೊಂಡಿತ್ತು.

ಟ್ಯಾಂಕರ್ಗಳಲ್ಲಿ ಅಪಾರ ಪ್ರಮಾಣದ ಇಂಧನ ಇರುವುದರಿಂದ ಬೆಂಕಿಯ ವ್ಯಾಪ್ತಿ ಮತ್ತಷ್ಟು ಹರಡಬಹುದು ಎಂದು ಅಧಿಕಾರಿಗಳು ಆಂತಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಇದುವರೆಗೆ ಒಟ್ಟು ಐದು ಬೋಗಿಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟುಕರಕಲಾಗಿವೆ.

10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಹತ್ತಿರದ ವಸತಿ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಸುರಕ್ಷತಾ ಕಾರಣಗಳಿಗಾಗಿ ವಿದ್ಯುತ್ ಸರಬರಾಜು ಕೂಡ ಕಡಿತಗೊಳಿಸಲಾಗಿದೆ.

ಘಟನೆ ನಡೆದ ಸ್ಥಳದ ಸಮೀಪವಿರುವ ಮನೆಗಳಲ್ಲಿನ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ.
ಇಲ್ಲಿನ ಜಿಲ್ಲಾಧಿಕಾರಿ ಎಂ.ಪ್ರತಾಪ್ ಅವರು ಅಗ್ನಿಶಾಮಕ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಆದೇಶಿಸಿದ್ದಾರೆ. ಅಪಘಾತದಲ್ಲಿ ಇಲ್ಲಿಯವರೆಗೆ ಯಾವುದೇ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ. ರಕ್ಷಣಾ ಕಾರ್ಯಾಚರಣೆಗಾಗಿ ಅರಕ್ಕೋಣಂನಿಂದ ವಿಪತ್ತು ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ.


ರೈಲು ಸೇವೆಗಳಲ್ಲಿ ವ್ಯತ್ಯಯ: ಘಟನೆಯಿಂದ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಕೆಲ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ರೈಲ್ವೆ ಇಲಾಖೆಯು ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದೆ. “ತಿರುವಳ್ಳೂರು ಬಳಿ ಸಂಭವಿಸಿದ ಘಟನೆಯಿಂದ ಮುಂಜಾಗೃತವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಬೆಂಕಿ ನಂದಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದ್ದರಿಂದ ರೈಲು ಸೇವೆಗಳಲ್ಲಿ ಈ ಕೆಳಗಿನ ಬದಲಾವಣೆಗಳನ್ನು ಮಾಡಲಾಗಿದೆ” ಎಂದು ರೈಲುಗಳ ಪಟ್ಟಿಯನ್ನು ಹಂಚಿಕೊಂಡಿದೆ. ತುರ್ತು ಸಹಾಯಕ್ಕಾಗಿ ಸಹಾಯವಾಣಿ: 044-25354151, 044-24354995 ತೆರೆಯಲಾಗಿದೆ.

ಘಟನಾ ಸ್ಥಳಕ್ಕೆ NDRF ತಂಡ ಆಗಮನ: ತಿರುವಳ್ಳೂರು ಜಿಲ್ಲಾಡಳಿತದ ಮನವಿ ಮೇರೆಗೆ ರಕ್ಷಣಾ ಮತ್ತು ಬೆಂಬಲ ಕಾರ್ಯಾಚರಣೆಗಾಗಿ 50 ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡ ಎರಡು ಎನ್ಡಿಆರ್ಎಫ್ ತಂಡಗಳನ್ನು ಘಟನಾ ಸ್ಥಳಕ್ಕೆ ಕರೆಯಿಸಲಾಗಿದೆ.

ಬೆಂಕಿ ನಂದಿಸಲು ಇನ್ನೂ ಕೆಲ ಗಂಟೆಗಳ ಅಗತ್ಯ: ತಮಿಳುನಾಡು ಸಚಿವ ಎಸ್.ಎಂ. ನಾಸರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಕರೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಇನ್ನೂ ಕೆಲ ಗಂಟೆಗಳು ಅಗತ್ಯವಿದೆ ಎಂದು ಜಿಲ್ಲಾಡಳಿತ ಹೇಳಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು