ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು.

ತಿರುವಳ್ಳೂರು : ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳ್ಳಿ ತಪ್ಪಿದ ಪರಿಣಾಮ, ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ.

ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ ಇದ್ದಕ್ಕಿದ್ದಂತೆ ಹಳಿತಪ್ಪಿದೆ. ಈ ವೇಳೆ ರೈಲಿನಲ್ಲಿದ್ದ ಡೀಸೆಲ್ ಟ್ಯಾಂಕರ್ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಗಧಗಿಸುತ್ತಿರುವ ಬೆಂಕಿಯ ಜ್ವಾಲೆಯ ಹಿನ್ನೆಲೆಯಲ್ಲಿ ಸುತ್ತಲೂ ದಟ್ಟ ಹೊಗೆ ಆವರಿಸಿಕೊಂಡಿತ್ತು.

ಟ್ಯಾಂಕರ್ಗಳಲ್ಲಿ ಅಪಾರ ಪ್ರಮಾಣದ ಇಂಧನ ಇರುವುದರಿಂದ ಬೆಂಕಿಯ ವ್ಯಾಪ್ತಿ ಮತ್ತಷ್ಟು ಹರಡಬಹುದು ಎಂದು ಅಧಿಕಾರಿಗಳು ಆಂತಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಇದುವರೆಗೆ ಒಟ್ಟು ಐದು ಬೋಗಿಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟುಕರಕಲಾಗಿವೆ.

10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಹತ್ತಿರದ ವಸತಿ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಸುರಕ್ಷತಾ ಕಾರಣಗಳಿಗಾಗಿ ವಿದ್ಯುತ್ ಸರಬರಾಜು ಕೂಡ ಕಡಿತಗೊಳಿಸಲಾಗಿದೆ.

ಘಟನೆ ನಡೆದ ಸ್ಥಳದ ಸಮೀಪವಿರುವ ಮನೆಗಳಲ್ಲಿನ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ.
ಇಲ್ಲಿನ ಜಿಲ್ಲಾಧಿಕಾರಿ ಎಂ.ಪ್ರತಾಪ್ ಅವರು ಅಗ್ನಿಶಾಮಕ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಆದೇಶಿಸಿದ್ದಾರೆ. ಅಪಘಾತದಲ್ಲಿ ಇಲ್ಲಿಯವರೆಗೆ ಯಾವುದೇ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ. ರಕ್ಷಣಾ ಕಾರ್ಯಾಚರಣೆಗಾಗಿ ಅರಕ್ಕೋಣಂನಿಂದ ವಿಪತ್ತು ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ.


ರೈಲು ಸೇವೆಗಳಲ್ಲಿ ವ್ಯತ್ಯಯ: ಘಟನೆಯಿಂದ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಕೆಲ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ರೈಲ್ವೆ ಇಲಾಖೆಯು ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದೆ. “ತಿರುವಳ್ಳೂರು ಬಳಿ ಸಂಭವಿಸಿದ ಘಟನೆಯಿಂದ ಮುಂಜಾಗೃತವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಬೆಂಕಿ ನಂದಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದ್ದರಿಂದ ರೈಲು ಸೇವೆಗಳಲ್ಲಿ ಈ ಕೆಳಗಿನ ಬದಲಾವಣೆಗಳನ್ನು ಮಾಡಲಾಗಿದೆ” ಎಂದು ರೈಲುಗಳ ಪಟ್ಟಿಯನ್ನು ಹಂಚಿಕೊಂಡಿದೆ. ತುರ್ತು ಸಹಾಯಕ್ಕಾಗಿ ಸಹಾಯವಾಣಿ: 044-25354151, 044-24354995 ತೆರೆಯಲಾಗಿದೆ.

ಘಟನಾ ಸ್ಥಳಕ್ಕೆ NDRF ತಂಡ ಆಗಮನ: ತಿರುವಳ್ಳೂರು ಜಿಲ್ಲಾಡಳಿತದ ಮನವಿ ಮೇರೆಗೆ ರಕ್ಷಣಾ ಮತ್ತು ಬೆಂಬಲ ಕಾರ್ಯಾಚರಣೆಗಾಗಿ 50 ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡ ಎರಡು ಎನ್ಡಿಆರ್ಎಫ್ ತಂಡಗಳನ್ನು ಘಟನಾ ಸ್ಥಳಕ್ಕೆ ಕರೆಯಿಸಲಾಗಿದೆ.

ಬೆಂಕಿ ನಂದಿಸಲು ಇನ್ನೂ ಕೆಲ ಗಂಟೆಗಳ ಅಗತ್ಯ: ತಮಿಳುನಾಡು ಸಚಿವ ಎಸ್.ಎಂ. ನಾಸರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಕರೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಇನ್ನೂ ಕೆಲ ಗಂಟೆಗಳು ಅಗತ್ಯವಿದೆ ಎಂದು ಜಿಲ್ಲಾಡಳಿತ ಹೇಳಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!