ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ವಿವಿಐಪಿ ಪಾಸ್ ಗಳು ರದ್ದು…..!

ಹಾಸನಾಂಬಾ ದೇವಿ ದರ್ಶನ 2025
ಅಕ್ಟೋಬರ್ 10 ರಿಂದ 22 ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದು ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಗೋಲ್ಡ್ ಕಾರ್ಡ್ ಪಡೆದರೆ ಮುಂಜಾನೆ 5 ರಿಂದ 11 ಗಂಟೆಯವರೆಗೆ ದರ್ಶನ ಗೋಲ್ಡ್ ಪಾಸ್ ನಲ್ಲಿ ಒಬ್ಬರಿಗೆ ಮಾತ್ರ ಅವಕಾಶ. ಹಾಸನಾಂಬೆ ಉತ್ಸವದಲ್ಲಿ ವಿಐಪಿ ಹಾಗೂ ವಿವಿಐಪಿ ಭಕ್ತರಿಂದ ಸಾಮಾನ್ಯ ಭಕ್ತರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ದರ್ಶನಕ್ಕೆ ಸಮಯ ನಿಗದಿಪಡಿಸುವಂತೆ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಸಲಹೆ ನೀಡಿದರು. “ಗೋಲ್ಡ್ ಕಾರ್ಡ್ ಭಕ್ತರಿಗೆ ಎರಡು ಗಂಟೆ, ಶಿಷ್ಟಾಚಾರ ಭಕ್ತರಿಗೆ ಎರಡು ಗಂಟೆ ಮಾತ್ರ ಅವಕಾಶ ನೀಡಿದರೆ ಸಾಮಾನ್ಯ ಜನರಿಗೆ ದರ್ಶನ ಸುಗಮವಾಗುತ್ತದೆ’ ಎಂದು ಅವರು ತಿಳಿಸಿದರು. ಹಾಸನದ ಜಿ.ಪಂ. ಸಭಾಂಗಣದಲ್ಲಿ ನಡೆದ ಉತ್ಸವದ ತಯಾರಿ ಸಭೆಯಲ್ಲಿ ಮಾತನಾಡಿದ ಸಚಿವರು, “ಹಾಸನಾಂಬೆ ಉತ್ಸವದ ವೇಳೆ ಒಂದೂವರೆ ತಿಂಗಳು ಇಲಾಖೆಯ ಬೇರೆ ಯಾವುದೇ ಕೆಲಸಗಳು ಆಗದೆ ನಿಂತುಹೋಗುತ್ತವೆ. ಕಳೆದ ವರ್ಷವೂ ಇದೇ ಪರಿಸ್ಥಿತಿ ಕಂಡಿದ್ದೆ. ಉತ್ಸವದ ಸಿದ್ಧತೆಯ ಜೊತೆಗೆ ಜನರ ಕೆಲಸವನ್ನೂ ನಿರ್ಲಕ್ಷಿಸಬಾರದು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಎಲ್ಲೆಡೆಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದ್ದರಿಂದ ವಿಶೇಷ ಭಕ್ತರ ಸಂಸ್ಕೃತಿ ಸಾಮಾನ್ಯ ಜನರಿಗೆ ತೊಂದರೆ ತರಬಾರದು ಎಂದು ಸಚಿವರು ಮನವಿ ಮಾಡಿದರು. ಜನರ ಅನುಕೂಲಕ್ಕಾಗಿ ಬೇಕಾದ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸಭೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!