ಗಗನಯಾತ್ರೆ ಶುಭಾಂಶು ಶುಕ್ಲಾ ಮರಳಿ ತಾನ್ನಾಡಿಗೆ ! ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಗಗನಯಾತ್ರಿ.

ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರನ್ನು ಬರಮಾಡಿಕೊಂಡರು. ಶುಕ್ಲಾ ಅವರು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಯಾಗಲಿದ್ದಾರೆ. ಬಳಿಕ, ತಮ್ಮ ತವರು ಲಖನೌಗೆ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆಕ್ಸಿಯಂ-4 ಮಿಷನ್‌ ಗಾಗಿ ಅಂತರ ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ, 2027 ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡು ತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿ ಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. ಆಗಸ್ಟ್ 22-23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ
ಹಿಂದಿರುಗುತ್ತಾರೆಎಂದು ಹೇಳಲಾಗಿದೆ. ಐಎಸ್‌ಎಸ್‌ನಲ್ಲಿ 18 ದಿನಗಳನ್ನು ಕಳೆದ ನಂತರ ಗಗನಯಾತ್ರಿ ಕಳೆದ ತಿಂಗಳು ಭೂಮಿಗೆ ಮರಳಿದ್ದರು. ಈ ಅವಧಿಯಲ್ಲಿ ಅವರು ಭಾರತಕ್ಕೆ ಸಂಬಂಧಿಸಿದ 7 ನಿರ್ದಿಷ್ಟ ಪ್ರಯೋಗಗಳನ್ನು ನಡೆಸಿದ್ದಾರೆ. ಅವು ಗಳನ್ನು ಈಗ ಭಾರತೀಯ ವಿಜ್ಞಾನಿಗಳು ಪರಿಶೀಲನೆಗಾಗಿ ಮರಳಿ ತರಲಾಗಿದ್ದು, ಫಲಿತಾಂಶಗಳು ಶೀಘ್ರದಲ್ಲೇ ಬರುವ ನಿರೀಕ್ಷೆಯಿದೆ. ಶುಭಾಂಶು ಶುಕ್ಲಾ ಅವರು ಭಾರತಕ್ಕೆ ಮರಳಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು, ಭಾರತದ

ಬಾಹ್ಯಾಕಾಶ ವೈಭವ ದೇಶದ ಮಣ್ಣನ್ನು ಸ್ಪರ್ಶಿಸಿದೆ. ಭಾರತ ಮಾತೆಯ ಪುತ್ರ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬೆಳಗ್ಗಿನ ಜಾವ ದೆಹಲಿಗೆ ಬಂದಿಳಿದರು. ಅವರೊಂದಿಗೆ ಮತ್ತೊಬ್ಬ ಸಮಾನ ಸಾಧನೆ ಮಾಡಿದ, ಭಾರತದ ಮೊದಲ ಮಾನವ ಗಗನಯಾನಕ್ಕೆ ಆಯ್ಕೆಯಾದ ಗಗನಯಾತ್ರಿಗಳಲ್ಲಿ ಒಬ್ಬರಾದ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ. ಬಾಲಕೃಷ್ಣ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಮಿಷನ್‌ ಭಾರತದ ನಿಯೋಜಿತ ಬ್ಯಾಕಪ್ ಆಗಿದ್ದರು ಎಂದು ಹೇಳಿದ್ದಾರೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!