ಭಾರತೀಯ ಕ್ರಿಕೆಟ್​ನಲ್ಲೀಗ ಗಂಭೀರ್​ ‘ಪವರ್​ಫುಲ್​’.ಕನ್ನಡಿಗ ಪ್ರಸಿದ್ಧ್​ ಕೃಷ್ಣಗೆ ಆಯ್ಕೆ ಸಮಿತಿ ಅನ್ಯಾಯ.!

 

ಟೀಮ್​ ಸೆಲೆಕ್ಷನ್​ ವಿಚಾರದಲ್ಲಂತೂ ಕೋಚ್ ಗಂಭೀರ್​​ ಹೇಳಿದ್ದ ಮಾತೇ ಫೈನಲ್​​. ಏಷ್ಯಾಕಪ್​ಗೆ ಟೀಮ್​ ಅನೌನ್ಸ್​ಮೆಂಟ್​ನೊಂದಿಗೆ ಗಂಭೀರ್​ ರಾಜಕೀಯ ಯಾವ ಮಟ್ಟಕ್ಕಿದೆ ಅನ್ನೋದು ಮತ್ತೊಮ್ಮೆ ಜಗತ್ತಿಗೆ ಗೊತ್ತಾಗಿದೆ.

ಗೌತಮ್​ ಗಂಭೀರ್​ ಟೀಮ್​ ಇಂಡಿಯಾದ ಹೆಡ್​ ಕೋಚ್​ ಆದಾಗಿನಿಂದ ರಾಜಕೀಯದ ಚರ್ಚೆ ಜೋರಾಗಿ ನಡೆದಿದೆ. ಗಂಭೀರ್​ಗೆ ಬಾಸ್​​ಗಳು ಫುಲ್​​ ಪವರ್​ ನೀಡಿರೋದು ಓಪನ್​ ಸೀಕ್ರೆಟ್​. ಸದ್ಯ ಟೀಮ್​ ಇಂಡಿಯಾದಲ್ಲಿ ಪವರ್​​ ಫುಲ್ ಪರ್ಸನ್​ ಗಂಭೀರ್ ಆಡಿದ್ದೇ ಆಟ. ಟೀಮ್​ ಸೆಲೆಕ್ಷನ್​ ವಿಚಾರದಲ್ಲಂತೂ ಗಂಭೀರ್​​ ಹೇಳಿದೆ ಮಾತೇ ಫೈನಲ್​​. ಏಷ್ಯಾಕಪ್​ಗೆ ಟೀಮ್​ ಅನೌನ್ಸ್​ಮೆಂಟ್​ನೊಂದಿಗೆ ಗಂಭೀರ್​ ರಾಜಕೀಯ ಯಾವ ಮಟ್ಟಕ್ಕಿದೆ ಅನ್ನೋದು ಮತ್ತೊಮ್ಮೆ ಜಗತ್ತಿಗೆ ಗೊತ್ತಾಗಿದೆ.

 

ಏಷ್ಯಾಕಪ್​ ಟೀಮ್​ನಲ್ಲಿ ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಸ್ಥಾನ ಸಿಗುತ್ತೆ ಅನ್ನೋದು ಟಾಕ್​ ಜೋರಾಗಿತ್ತು. ಕಳೆದ ಐಪಿಎಲ್​ನ ಪರ್ಪಲ್​ ಕ್ಯಾಪ್​ ಹೋಲ್ಡರ್​ ಆಗಿ ಪ್ರಸಿದ್ಧ್​ ಕೃಷ್ಣ ಹೊರಹೊಮ್ಮಿದ್ರು. 15 ಪಂದ್ಯಗಳಲ್ಲಿ 25 ವಿಕೆಟ್​ ಬೇಟೆಯಾಡಿದ್ರು. ಹೀಗಾಗಿ ಪ್ರಸಿದ್ಧ್​​ಗೆ ಏಷ್ಯಾಕಪ್​​ ಟಿಕೆಟ್​ ಫಿಕ್ಸ್​ ಎನ್ನಲಾಗಿತ್ತು. ಸೆಲೆಕ್ಷನ್​​ ಮೀಟಿಂಗ್​​ ಪ್ರಸಿದ್ಧ ಆಯ್ಕೆ ಜೋರು ಚರ್ಚೆಯೂ ನಡೆದಿತ್ತು. ಆದ್ರೆ, ಫೈನಲ್​ ಟೀಮ್​ ಅನೌನ್ಸ್​ ಆದಾಗ ಆಗಿದ್ದು ನಿರಾಸೆ.

ಐಪಿಎಲ್​ನ ಪರ್ಪಲ್​ ಕ್ಯಾಪ್​ ಹೋಲ್ಡರ್​​ಗೆ ಕೊಕ್​ ಕೊಟ್ಟ ಸೆಲೆಕ್ಷನ್​ ಕಮಿಟಿ 3ನೇ ವೇಗಿಯಾಗಿ ಮಣೆ ಹಾಕಿರೋದು ಗಂಭೀರ್​​ ಶಿಷ್ಯ ಹರ್ಷಿತ್​ ರಾಣಾಗೆ. ಐಪಿಎಲ್​​ 2025ನಲ್ಲಿ 14 ಪಂದ್ಯಗಳನ್ನಾಡಿದ ಈತ ಕೇವಲ 15 ವಿಕೆಟ್​ ಕಬಳಿಸಿದ್ದ. ಇಷ್ಟೆ ಅಲ್ಲ, 10.18ರ ಎಕಾನಮಿಯಲ್ಲಿ ರನ್​ ಬಿಟ್ಟು ಕೊಟ್ಟು ದುಬಾರಿಯಾಗಿದ್ದ. ಇನ್ನು, ಟೀಮ್​ ಇಂಡಿಯಾ ಪರ ಆಡಿರೋ ಏಕೈಕ ಟಿ20ಯಲ್ಲೂ 9ರ ಎಕಾನಮಿಯಲ್ಲಿ ರನ್​ಬಿಟ್ಟು ಕೊಟ್ಟಿದ್ದಾನೆ. ಇಂತಾ ವೇಗಿಗೆ ಸೆಲೆಕ್ಷನ್​ ಕಮಿಟಿ ಮಣೆ ಹಾಕಿದೆ. ರಾಣಾ ಸ್ಥಾನ ನೀಡೋ ಭರದಲ್ಲಿ 2024 ಟಿ20 ವಿಶ್ವಕಪ್​ ಗೆದ್ದ ತಂಡದ ಸದಸ್ಯ ಅನುಭವಿ ಮೊಹಮ್ಮದ್​ ಸಿರಾಜ್​ಗೂ ಕೊಕ್​ ನೀಡಲಾಗಿದೆ.

ಗಂಭೀರ್​ ಕೋಚ್​ ಆದಾಗಿನಿಂದಲೂ ಹರ್ಷಿತ್​ ರಾಣಾ ಪರ ಜೋರಾಗೆ ಬ್ಯಾಟಿಂಗ್​ ನಡೆಸಿದ್ದಾರೆ. ಕಳೆದ ವರ್ಷದ ಅಂತ್ಯದಲ್ಲಿ ನಡೆದ ಬಾರ್ಡರ್​​-ಗವಾಸ್ಕರ್​ ಟೆಸ್ಟ್​ ಸರಣಿಯ ತಂಡದಲ್ಲಿ ಕೇವಲ 13 ಫಸ್ಟ್​ ಕ್ಲಾಸ್​ ಪಂದ್ಯಗಳನ್ನಾಡಿದ್ದ ಅನಾನುಭವಿ ರಾಣಾಗೆ ಸ್ಥಾನ ನೀಡಲಾಗಿತ್ತು. ಇಷ್ಟೇ ಅಲ್ಲ, ಪ್ಲೇಯಿಂಗ್​ ಇಲೆವೆನ್​ನಲ್ಲಿ ಚಾನ್ಸ್​ ನೀಡಿ ಆಡಿಸಲಾಯ್ತು. ರೆಡ್​ಬಾಲ್​ ಕ್ರಿಕೆಟ್​​ನಲ್ಲಿ ಅತಿ ಕಡಿಮೆ ಅನುಭವ ಹೊಂದಿದ್ರೂ ರಾಣಾನ ಸೆಲೆಕ್ಟ್​​ ಮಾಡಿದ್ದು, ಡೆಬ್ಯೂ ಮಾಡಿಸಿದ್ದು ಇದೆರಡರ ಹಿಂದಿದ್ದಿದ್ದು ಗಂಭೀರ್​.

ಆರ್ಷ್​​ದೀಪ್​ ಸಿಂಗ್​ ಕಳೆದ 2 ವರ್ಷದಿಂದ ಟೀಮ್​ ಇಂಡಿಯಾದ ಭಾಗವಾಗಿದ್ದಾರೆ. ಆದ್ರೆ, ಈ ಆರ್ಷ್​​​ದೀಪ್​ಗೂ ಮುನ್ನ ಏಕದಿನ ಫಾರ್ಮೆಟ್​​ಗೆ ಡೆಬ್ಯೂ ಮಾಡಿದ್ದು ಹರ್ಷಿತ್​ ರಾಣಾ. ಅದೂ ಮಹತ್ವದ ಚಾಂಪಿಯನ್ಸ್​ ಟ್ರೋಫಿ ಟೂರ್ನಿಯಲ್ಲಿ. ಕಳೆದ ತಿಂಗಳು ನಡೆದ ಇಂಗ್ಲೆಂಡ್​ ಪ್ರವಾಸದ ವೇಳೆ ಹರ್ಷಿತ್​​ ರಾಣಾನ ತಂಡದಲ್ಲಿ ಉಳಿಸಿಕೊಳ್ಳೋಕೆ ಗೌತಮ್​ ಗಂಭೀರ್​​ ಶತ ಪ್ರಯತ್ನ ಪಟ್ಟಿದ್ರು. ಅಂದುಕೊಂಡಂತೆ ಒಂದು ಪಂದ್ಯದ ವೇಳೆ ತಂಡದಲ್ಲಿ ಉಳಿಸಿಕೊಂಡಿದ್ರು ಕೂಡ. ಆದ್ರೆ, ತೀವ್ರ ಟೀಕೆ ಎದುರಾದ ಬಳಿಕ ತಂಡದಿಂದ ರಿಲೀಸ್​ ಮಾಡಲಾಗಿತ್ತು.

ಗೌತಮ್​ ಗಂಭೀರ್​ ಭಾರತೀಯ ಕ್ರಿಕೆಟ್​​ನಲ್ಲಿ ಎಷ್ಟು ಪವರ್​ಫುಲ್​ ಆಗಿದ್ದಾರೆ ಅನ್ನೋದಕ್ಕೆ ಹರ್ಷಿತ್​ ರಾಣಾ ಕಥೆ ಬೆಸ್ಟ್​ ಎಕ್ಸಾಂಪಲ್​ ಆಗಿದೆ. 6 ತಿಂಗಳ ಅವಧಿಯಲ್ಲಿ ಶಿಷ್ಯನನ್ನ ಆಲ್​​ಫಾರ್ಮೆಟ್​ ಪ್ಲೇಯರ್​ ಮಾಡಿದ್ದಾರೆ. ಆದ್ರೆ, ಗುರು ಗಂಭೀರ್​ ಬ್ಯಾಟಿಂಗ್​ ಮಾಡಿದ್ದಕ್ಕೆ ತಕ್ಕಂತೆ ಹರ್ಷಿತ್​ ರಾಣಾ ಪರ್ಫಾಮ್​ ಮಾಡಿಲ್ಲ. ಏಷ್ಯಾಕಪ್​ನಲ್ಲಾದ್ರೂ ನ್ಯಾಯ ಒದಗಿಸ್ತಾರಾ?.

 

Related Posts

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!

ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ದೆಹಲಿ ತಂಡವನ್ನು ಮಣಿಸಿದ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡದ ಅತಿದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!