ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ರಾಹುಲ್‌ ದ್ರಾವಿಡ್‌ ಅವರ ನಂತರ ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆ ಅಲಂಕರಿಸುವಂತೆ ಬಿಸಿಸಿಐ ಈ ಹಿಂದೆ ಗೌತಮ್‌ ಗಂಭೀರ್‌ ಬಳಿ ಮನವಿ ಮಾಡಿರುವುದಾಗಿ ವರದಿಯಾಗಿತ್ತು. ಟಿ20 ವಿಶ್ವಕಪ್‌ ಟೂರ್ನಿ ಬಳಿಕ ದ್ರಾವಿಡ್‌ ಅವರ ಮುಖ್ಯಕೋಚ್‌ ಹುದ್ದೆಯ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಬಿಸಿಸಿಐ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು.

ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದ್ದಾರೆ. ಪುರುಷರ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಿಸಲಾಗಿದೆ ಜಯ್ ಶಾ ಪ್ರಕಟಿಸಿದರು.

ಟೀಂ ಇಂಡಿಯಾದ ನೂತನ ಕೋಚ್‌ ಗೌತಮ್‌ ಗಂಭೀರ್‌ ಅವರನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್‌ ಬಹಳ ವೇಗವಾಗಿ ಬದಲಾಗುತ್ತಿದ್ದು ಗೌತಮ್ ಅವರು ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಹಲವು ಪಾತ್ರಗಳನ್ನು ನಿರ್ವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೀಗಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲು ಅವರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವ ಗೌತಮ್‌ ಗಂಭೀರ್‌ ಅವರಿಗೆ ಬಿಸಿಸಿಐ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಜಯ್‌ ಶಾ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು