ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು, ಗಿಲ್ಲಿ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ. ರಿಷಾ ಅವರ ಬಟ್ಟೆಗಳನ್ನು ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿಲಾಗಿದೆ. ಸದ್ಯ ಈ ಪ್ರಕರಣವನ್ನು ಮಹಿಳಾ ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಎಲ್ಲರ ಜೊತೆ ತಮಾಷೆ ಮಾಡುತ್ತಾ ಕಾಲ ಕಳೆಯುತ್ತಾ ಇದ್ದಾರೆ. ಆದರೆ ಅವರು ಮಾಡುವ ಕೆಲವು ತಮಾಷೆಯಿಂದ ತೊಂದರೆ ಕೂಡ ಉಂಟಾಗುತ್ತದೆ. ಅಚ್ಚರಿ ಎಂದರೆ, ಈಗ ಬಿಗ್ ಬಾಸ್ ಮನೆ ಒಳಗಿನ ವಿಷಯ ಮಹಿಳಾ ಆಯೋಗದ (Women Commission) ತನಕ ತಲುಪಿದೆ! ಹೌದು, ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಅಷ್ಟಕ್ಕೂ ಗಿಲ್ಲಿ ಮಾಡಿದ ತಪ್ಪು ಏನು? ಸಹ ಸ್ಪರ್ಧಿ ರಿಷಾ (Risha) ಅವರ ಬಟ್ಟೆಗಳನ್ನು ಮುಟ್ಟಿದ್ದು. ಈ ವಿಚಾರವನ್ನು ಇಟ್ಟುಕೊಂಡು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಒಂದು ದಿನ ರಿಷಾ ಅವರು ಗಿಲ್ಲಿ ನಟನ ತಾಳ್ಮೆ ಕೆಡುವಂತೆ ನಡೆದುಕೊಂಡಿದ್ದರು. ಬಾತ್ ರೂಮ್ ಒಳಗೆ ಹೋಗಿದ್ದ ರಿಷಾ ಅವರು ದೀರ್ಘ ಸಮಯ ತೆಗೆದುಕೊಂಡರು. ತಮಗೆ ನೀರು ಬೇಕು ಎಂದು ಗಿಲ್ಲಿ ನಟ ಮನವಿ ಮಾಡಿದರೂ ಕೂಡ ರಿಷಾ ಅದಕ್ಕೆ ಸ್ಪಂದಿಸಲಿಲ್ಲ. ಅದರಿಂದಾಗಿ ಗಿಲ್ಲಿಗೆ ಕೋಪ ಬಂತು. ಆಗ ಗಿಲ್ಲಿ ನಡೆದುಕೊಂಡ ರೀತಿಯಿಂದ ಎಲ್ಲರಿಗೂ ಅಚ್ಚರಿ ಆಯಿತು.

ಗಿಲ್ಲಿ ಅವರು ರಿಷಾ ಅವರ ಬಟ್ಟೆಗಳನ್ನೆಲ್ಲ ತಂದು ಬಾತ್​ ರೂಮ್​ ಮುಂದೆ ಸುರಿದರು. ಆ ಬಳಿಕ ಗಿಲ್ಲಿ ಮತ್ತು ರಿಷಾ ನಡುವೆ ದೊಡ್ಡ ಜಗಳ ಆಯಿತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಈಗ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ಅಲ್ಲದೇ, ಗಿಲ್ಲಿ ನಟ ಅವರು ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಈ ದೂರಿನ ಅನ್ವಯ ಮಹಿಳಾ ಆಯೋಗವು ವಿಡಿಯೋ ಫೂಟೇಜ್ ಪರಿಶೀಲನೆ ಮಾಡುತ್ತಿದೆ. ಆದರೆ ಬಿಗ್ ಬಾಸ್ ಆಯೋಜಕರು ಯಾವುದೇ ವಿಡಿಯೋ ಫೂಟೇಜ್ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಈ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಜಗಳ ನಡೆದಾಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದರು. ಅದು ಬಿಗ್ ಬಾಸ್ ಮನೆಯ ಮೂಲ ನಿಯಮದ ಉಲ್ಲಂಘನೆ. ಆದರೂ ಕೂಡ ಇನ್ನುಳಿದ ಸ್ಪರ್ಧಿಗಳು ಕೇವಲ ವಾರ್ನಿಂಗ್ ನೀಡಿ ರಿಷಾ ಅವರನ್ನು ಉಳಿಸಿಕೊಂಡರು. ವಾರಾಂತ್ಯದ ಸಂಚಿಕೆಯಲ್ಲಿ ಈ ವಿಚಾರದ ಬಗ್ಗೆ ಸುದೀಪ್ ಕೂಡ ಮಾತನಾಡಿದ್ದರು. ಹೆಣ್ಮಕ್ಕಳ ಬಟ್ಟೆ, ಬ್ಯಾಗ್​​ಗಳಿಗೆ ಅನುಮತಿ ಇಲ್ಲದೇ ಕೈ ಹಾಕಬಾರದು ಎಂದು ಗಿಲ್ಲಿಗೆ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!