ಅಶ್ವಿನಿ ಕಣ್ಣಲ್ಲಿ ನೀರು ತರಿಸಿದ ಗಿಲ್ಲಿ, ‘ನಾನು ಬದುಕ್ತಾ ಇರೋದೇ ಮರ್ಯಾದೆಗೋಸ್ಕರ.’

ಬಿಗ್​ಬಾಸ್​​ನ ಇವತ್ತಿನ ಎಪಿಸೋಡ್​​ನಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ಮಧ್ಯೆ ಘನಘೋರ ಮಾತಿನ ಯುದ್ಧ ನಡೆದಿದ್ದು, ಕೊನೆಯಲ್ಲಿ ಅಶ್ವಿನಿ ಗೌಡ ಕಣ್ಣೀರಿಟ್ಟಿದ್ದಾರೆ.

ಇಬ್ಬರ ಮಧ್ಯೆ ಆಗಿದ್ದೇನು?
ಇಂದು ರಾತ್ರಿ ಬಿಗ್​​ಬಾಸ್ ಮನೆಯಲ್ಲಿ ಏನು ಆಗಿದೆ ಅನ್ನೋದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಗಿಲ್ಲಿ ಮತ್ತು ಅಶ್ವಿನಿ ಗೌಡ ಮಧ್ಯೆ ಗಲಾಟೆ ಆಗಿರೋದಂತೂ ಸತ್ಯ. ಕಲರ್ಸ್ ಕನ್ನಡ ಬೆಳಗ್ಗೆ ಪ್ರೊಮೋ ಶೇರ್ ಮಾಡಿದೆ. ಅದರಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ಗೇಮ್​ನ ಉಸ್ತುವಾರಿ ನೀಡಲಾಗಿದೆ. ಈ ವೇಳೆ ಸ್ಪರ್ಧಿಗಳ ನಡುವೆ ಗೇಮ್ ಆಡಿಸುವ ವಿಚಾರಕ್ಕೆ ಗಲಾಟೆ ಆಗಿದೆ. ಒಬ್ಬರಿಗೊಬ್ಬರು ಕರೆಕ್ಟ್ ಆಗಿ ಉಸ್ತುವಾರಿ ಮಾಡುವಂತೆ ಕಿರುಚಾಡಿದ್ದಾರೆ. ಆಗ ಗಿಲ್ಲಿ, ನೀನು ಕರೆಕ್ಟ್ ಆಗಿ ಮಾಡು ಎಂದಿದ್ದಾರೆ. ಅಷ್ಟಕ್ಕೆ ರೊಚ್ಚಿಗೇಳುವ ಅಶ್ವಿನಿ, ನೀನ್ಯಾರು ಅಂತಾ ಹೇಳೋಕೆ ನೀನ್ಯಾವನೋ ಎಂದು ಕೂಗಾಡಿದ್ದಾರೆ. ಆಗ ಇಬ್ಬರ ಮಧ್ಯೆ ಮಾತಿನ ಯುದ್ಧ ಜೋರಾಗಿ ನಡೆದಿದೆ. ಮಾತಿನ ಮಧ್ಯೆ ನೀನ್ಯಾವನೋ, ಯೋಗ್ಯತೆ ಎಂಬ ಪದಗಳೆಲ್ಲ ತೂರಿಕೊಂಡು ಬಂದಿವೆ. ಇದೇ ಗಲಾಟೆಯಲ್ಲಿ ಅಶ್ವಿನಿಗೆ ಗಿಲ್ಲಿ ನೋವು ತರುವ ರೀತಿಯಲ್ಲಿ ಮಾತನ್ನಾಡಿದಂತೆ ಕಾಣ್ತಿದೆ. ಗಲಾಟೆ ಮುಗಿದ ಬಳಿಕ ಧ್ರುವಂತ್, ಜಾಹ್ನವಿ ಹಾಗೂ ಧನುಷ್ ಜೊತೆ ಅಶ್ವಿನಿ ನೋವು ಹಂಚಿಕೊಂಡಿದ್ದಾರೆ. ಒಬ್ಬ ಕಾಮಿಡಿ ನಟ ಅಂದಮಾತ್ರಕ್ಕೆ ಏನು ಮಾತಾಡಿದರೂ ಓಕೆನಾ? ಒಬ್ಬರನ್ನ ತೇಜೋವಧೆ ಮಾಡೋದು ಎಷ್ಟು ಸರಿ? ಅದೆಲ್ಲ ಮಾತನ್ನಾಡೋಕೆ ಆತ ಯಾರು? ಎಂದು ಬೇಸರ ಹೊರ ಹಾಕಿದ್ದಾರೆ.ಗಿಲ್ಲಿ ಹೇಳಿದ್ದೇನು..?
ಗಾರ್ಡನ್ ಏರಿಯಾದಲ್ಲಿ ಅಶ್ವಿನಿ, ಜಾಹ್ನವಿ ಹಾಗೂ ಧ್ರುವಂತ್ ಮತ್ತು ರಾಶಿಕಾ ಒಂದು ಕಡೆ ಕೂತ್ಕೊಂಡು ಗಲಾಟೆ ವಿಚಾರವನ್ನು ಚರ್ಚೆ ಮಾಡ್ತಿರುತ್ತಾರೆ. ಅವರಿಗೆ ಕೇಳುವ ರೀತಿಯಲ್ಲಿ ಜೋರಾಗಿ.. ಎಲ್ಲರೂ ವೃದ್ಧಾಪ್ಯದವರೇ ಸೇರಿ ಹೋಗ್ತಾರೆ ಎಂದು ಕಷ್ಟಪಟ್ಟು ಕಳುಹಿಸುತ್ತ ಇದ್ದಾರೆ ಎಂದಿದ್ದಾರೆ. ವೃದ್ಧರು ಅಂತಾ ಹೇಳಿರೋದು ಅಶ್ವಿನಿಗೆ ಹರ್ಟ್ ಆದಂತೆ ಕಾಣ್ತಿದೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!