ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗೂಡ್ ನ್ಯೂಸ್ – ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ.

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಈಗಾಗಲೇ ನಡೆಯುತ್ತಿರುವ ರಾಗಿ ಮಾಲ್ಟ್ ವಿತರಣಾ ಯೋಜನೆಯನ್ನು ಮುಂದುವರಿಸಿ, ವಾರದಲ್ಲಿ 3 ದಿನಗಳ ಬದಲು 5 ದಿನಗಳವರೆಗೆ ವಿಸ್ತರಿಸುವ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು ಈ ವಿಷಯದ ಕುರಿತು ಮಾಹಿತಿ ನೀಡಿದರು.

ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ (ಚಿಕ್ಕಬಳ್ಳಾಪುರ) ವತಿಯಿಂದ ಈಗಾಗಲೇ ತರಗತಿ 1 ರಿಂದ 10ರ ವರೆಗೆ ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿದ “ಸಾಯಿ ಶ್ಯೂರ್” ರಾಗಿ ಹೆಲ್ತ್ ಮಿಕ್ಸ್ ಪೌಡರ್ ವಿತರಣೆ ನಡೆಯುತ್ತಿದೆ. ಈಗಿನಿಂದ ಈ ಸೇವೆ ವಾರದಲ್ಲಿ ಐದು ದಿನ ಲಭ್ಯವಾಗಲಿದೆ.

ಸಚಿವ ಸಂಪುಟದಿಂದ ಇನ್ನಷ್ಟು ಪ್ರಮುಖ ತೀರ್ಮಾನಗಳು:

ರೈತರು ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ನಿರ್ಧಾರ.

ಮೆಟ್ರೋ ಎಲಿವೇಟೆಡ್ ಕಾರಿಡಾರ್ (ಹಂತ-3) ಗೆ ಅನುಮೋದನೆ:
ಜೆಪಿನಗರ 4ನೇ ಹಂತದಿಂದ ಹೆಬ್ಬಾಳ, ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ
ಒಟ್ಟು ಉದ್ದ: 37.121 ಕಿ.ಮೀ.
ಡಬಲ್ ಡೆಕ್ಕರ್ ಮೆಟ್ರೋ ನಿರ್ಮಾಣಕ್ಕೆ ಅನುಮೋದನೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕದಲ್ಲಿ ಬದಲಾವಣೆ:
ಮಾರುಕಟ್ಟೆ ಶುಲ್ಕ: 41 ಪೈಸೆಯಿಂದ 42 ಪೈಸೆಗೆ
ವಹಿವಾಟು ವೆಚ್ಚ: 0.01 ಪೈಸೆ ಹೆಚ್ಚಳ

ಆಶಾ ಕಿರಣ ಯೋಜನೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳ್ಳಲಿದೆ.
ಉಚಿತ ಕಣ್ಣಿನ ತಪಾಸಣೆ ಮತ್ತು ಅಂಧತ್ವ ನಿವಾರಣಾ ಕಾರ್ಯಕ್ರಮ
₹52.85 ಕೋಟಿ ಅನುದಾನ

ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ – ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ರಾಯಸಂದ್ರ ಗ್ರಾಮದಲ್ಲಿ

25 ಎಕರೆ ಜಮೀನು ಖರೀದಿಗೆ ₹65 ಕೋಟಿ ಮೊತ್ತಕ್ಕೆ ಕರ್ನಾಟಕ ಗೃಹ ಮಂಡಳಿಯಿಂದ ಅನುಮೋದನೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!