ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್; ರಿಚಾರ್ಜ್‌ನಲ್ಲಿ ದೊಡ್ಡ ಬದಲಾವಣೆ!

 

ಟೆಲಿಕಾಂ ಕಂಪನಿಗಳ ಏಕಸ್ವಾಮ್ಯಕ್ಕೆ ಬ್ರೇಕ್ ಹಾಕಿರುವ ಟ್ರಾಯ್, ಇನ್ನು ಮುಂದೆ ಪ್ರತಿಯೊಂದು ವ್ಯಾಲಿಡಿಟಿಯಲ್ಲೂ ಕೇವಲ ಕಾಲ್ ಮತ್ತು ಎಸ್‌ಎಂಎಸ್ ಪ್ಯಾಕ್‌ಗಳನ್ನು ನೀಡಲೇಬೇಕು ಎಂದು ಸೂಚಿಸಿದೆ. ಇದರಿಂದ ಸಾಮಾನ್ಯ ಗ್ರಾಹಕರಿಗೆ ಭಾರಿ ಲಾಭವಾಗಲಿದೆ.

 

ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ಮಂಗಳವಾರ ಟೆಲಿಕಾಂ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ದಾರಿ ಮಾಡಿಕೊಡುವ ಹೊಸ ಪ್ರಸ್ತಾವನೆಯನ್ನು ಮುಂದಿಟ್ಟಿದೆ. ಇತ್ತೀಚಿನ ವರ್ಷಗಳಲ್ಲಿ ಮೊಬೈಲ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚು ಡೇಟಾ ಆಧಾರಿತವಾಗುತ್ತಿದ್ದು, ಕರೆ ಮತ್ತು ಎಸ್ಎಂಎಸ್ ಮಾತ್ರ ಬೇಕಾದ ಗ್ರಾಹಕರು ಕೂಡ ಅನಿವಾರ್ಯವಾಗಿ ಇಂಟರ್ನೆಟ್ ಸೇವೆಗಳಿಗಾಗಿ ಹೆಚ್ಚುವರಿ ಹಣ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಮಸ್ಯೆಯನ್ನು ಪರಿಹರಿಸಲು ಟ್ರಾಯ್ ಹೊಸ ನಿಯಮಗಳನ್ನು ತರಲು ಮುಂದಾಗಿದೆ.

ಈ ಪ್ರಸ್ತಾವನೆಯ ಪ್ರಕಾರ, ಟೆಲಿಕಾಂ ಕಂಪನಿಗಳು ಧ್ವನಿ ಕರೆ ಮತ್ತು ಎಸ್ಎಂಎಸ್ ಸೇವೆಗಳಿಗೆ ಮಾತ್ರ ಸಂಬಂಧಿಸಿದ ಕಡಿಮೆ ಬೆಲೆಯ ವಿಶೇಷ ಸುಂಕದ ವೋಚರ್‌ಗಳನ್ನು ಕಡ್ಡಾಯವಾಗಿ ಪರಿಚಯಿಸಬೇಕು. ಮುಖ್ಯವಾಗಿ, ಇವುಗಳಲ್ಲಿ ಡೇಟಾ ಸೌಲಭ್ಯ ಇರಬಾರದು. ಜೊತೆಗೆ, ಈ ಯೋಜನೆಗಳ ಬೆಲೆಗಳು ಡೇಟಾ ಹೊಂದಿರುವ ಪ್ರಸ್ತುತ ಪ್ಲಾನ್‌ಗಳಿಗಿಂತ ಸ್ಪಷ್ಟವಾಗಿ ಕಡಿಮೆ ಇರಬೇಕು ಎಂಬುದನ್ನು TRAI ಕಡ್ಡಿ ತುಂಡರಿಸಿದಂತೆ ಹೇಳಿದೆ.

ಇದು ಯಾಕೆ ಅಗತ್ಯವಾಯಿತು ಎನ್ನುವುದಕ್ಕೆ ಟ್ರಾಯ್ ನೀಡಿರುವ ಸ್ಪಷ್ಟನೆ ಗಮನಾರ್ಹವಾಗಿದೆ. ಹಿಂದಿನ ನಿರ್ದೇಶನಗಳ ಅನ್ವಯ ಕೆಲ ಕಂಪನಿಗಳು ಕಾಲ್ ಮತ್ತು ಎಸ್ಎಂಎಸ್ ಮಾತ್ರ ಪ್ಯಾಕ್‌ಗಳನ್ನು ಪರಿಚಯಿಸಿದ್ದರೂ, ಅವುಗಳ ಬೆಲೆಗಳು ಹೆಚ್ಚು ಕಡಿಮೆಯಾಗಿರಲಿಲ್ಲ. ಅಂದರೆ, ಡೇಟಾ ಸೌಲಭ್ಯವನ್ನು ತೆಗೆದರೂ ಗ್ರಾಹಕರಿಗೆ ದೊಡ್ಡ ಮಟ್ಟದ ಉಳಿತಾಯವಾಗಲಿಲ್ಲ. ಇದರಿಂದ ಗ್ರಾಹಕರಿಗೆ ಯಾವುದೇ ಪ್ರಯೋಜನವಾಗದೆ, ಕಂಪನಿಗಳ ಲಾಭ ಮಾತ್ರ ಮುಂದುವರಿದಿತ್ತು ಎಂದು ಟ್ರಾಯ್ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ, “ಟೆಲಿಕಾಂ ಗ್ರಾಹಕ ರಕ್ಷಣೆ ನಿಯಮಗಳು, 2026” ಎಂಬ ಕರಡು ನಿಯಮವನ್ನು TRAI ಹೊರತಂದಿದೆ. ಈ ನಿಯಮದ ಅಡಿಯಲ್ಲಿ, ಪ್ರತಿಯೊಂದು ಟೆಲಿಕಾಂ ಸೇವಾ ಪೂರೈಕೆದಾರರು ಕನಿಷ್ಠ ಒಂದು ಕಾಲ್ ಮತ್ತು ಎಸ್ಎಂಎಸ್ ಮಾತ್ರ ಯೋಜನೆಯನ್ನು ನೀಡುವುದು ಕಡ್ಡಾಯವಾಗುತ್ತದೆ. ಇನ್ನೊಂದು ಪ್ರಮುಖ ಅಂಶವೆಂದರೆ, ಈ ಯೋಜನೆಗಳು ಕೇವಲ ದೀರ್ಘಾವಧಿಯದ್ದಾಗಿರದೆ, ಕಡಿಮೆ ಮಾನ್ಯತೆಯ ಆಯ್ಕೆಯಲ್ಲಿಯೂ ಲಭ್ಯವಾಗಬೇಕು ಎನ್ನುವುದಾಗಿದೆ.

TRAI ಈ ಕ್ರಮದಿಂದ ಎರಡು ಪ್ರಮುಖ ಗುರಿಗಳನ್ನು ಸಾಧಿಸಲು ಬಯಸುತ್ತಿದೆ. ಮೊದಲನೆಯದಾಗಿ, ಗ್ರಾಹಕರಿಗೆ ಆಯ್ಕೆಯ ಸ್ವಾತಂತ್ರ್ಯ ನೀಡುವುದು. ಅಂದರೆ, ಯಾರಿಗೆ ಡೇಟಾ ಅಗತ್ಯವಿಲ್ಲವೋ ಅವರು ಕೇವಲ ಕರೆ ಮತ್ತು SMS ಸೇವೆಗಳಿಗಾಗಿ ಕಡಿಮೆ ಬೆಲೆಗೆ ಯೋಜನೆಗಳನ್ನು ಆರಿಸಿಕೊಳ್ಳಬಹುದು.
TRAI ಈ ಕ್ರಮದಿಂದ ಎರಡು ಪ್ರಮುಖ ಗುರಿಗಳನ್ನು ಸಾಧಿಸಲು ಬಯಸುತ್ತಿದೆ. ಮೊದಲನೆಯದಾಗಿ, ಗ್ರಾಹಕರಿಗೆ ಆಯ್ಕೆಯ ಸ್ವಾತಂತ್ರ್ಯ ನೀಡುವುದು. ಅಂದರೆ, ಯಾರಿಗೆ ಡೇಟಾ ಅಗತ್ಯವಿಲ್ಲವೋ ಅವರು ಕೇವಲ ಕರೆ ಮತ್ತು SMS ಸೇವೆಗಳಿಗಾಗಿ ಕಡಿಮೆ ಬೆಲೆಗೆ ಯೋಜನೆಗಳನ್ನು ಆರಿಸಿಕೊಳ್ಳಬಹುದು.

ಟ್ರಾಯ್ ಹೇಳುವಂತೆ, ಈ ತಿದ್ದುಪಡಿ ಪಾರದರ್ಶಕತೆಯನ್ನು ಹೆಚ್ಚಿಸುವುದರ ಜೊತೆಗೆ ಟೆಲಿಕಾಂ ಮಾರುಕಟ್ಟೆಯಲ್ಲಿ ಆರೋಗ್ಯಕರ ಸ್ಪರ್ಧೆಯನ್ನು ಉತ್ತೇಜಿಸುತ್ತದೆ. ಕಂಪನಿಗಳು ಗ್ರಾಹಕರ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ರೀತಿಯ ಯೋಜನೆಗಳನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಟ್ರಾಯ್ ಹೇಳುವಂತೆ, ಈ ತಿದ್ದುಪಡಿ ಪಾರದರ್ಶಕತೆಯನ್ನು ಹೆಚ್ಚಿಸುವುದರ ಜೊತೆಗೆ ಟೆಲಿಕಾಂ ಮಾರುಕಟ್ಟೆಯಲ್ಲಿ ಆರೋಗ್ಯಕರ ಸ್ಪರ್ಧೆಯನ್ನು ಉತ್ತೇಜಿಸುತ್ತ

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!