ರಾಯರ ಭಕ್ತರಿಗೆ ಶುಭ ಸುದ್ದಿ.. ಶೀಘ್ರದಲ್ಲೇ ಬರಲಿದೆ ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿ !

ಜೀ ಕನ್ನಡ ವಾಹಿನಿಯ ಬಹು ನಿರೀಕ್ಷಿತ ಧಾರಾವಾಹಿ ಶ್ರೀ ರಾಘವೇಂದ್ರ ಮಹಾತ್ಮೆ. ರಾಯರ ಪವಾಡಗಳನ್ನ ಸಾರುವ ಭಕ್ತಿ ಪ್ರಧಾನ ಧಾರಾವಾಹಿ. ರಾಯರ ಆರಾಧಕರಿಗೆ ವಿಭಿನ್ನ ದೃಶ್ಯ ವೈಭವವನ್ನ ಕಟ್ಟಿಕೊಡಲು ಸಜ್ಜಾಗಿದೆ ಜೀ ವಾಹಿನಿ. ಕಥೆ, ನಿರ್ಮಾಣದ ಜವಾಬ್ದಾರಿಯನ್ನ ವಾಹಿನಿಯೇ ಹೊತ್ತಿದ್ದು, ಭೂಮಿಗೆ ಬಂದ ಭಗವಂತ ಖ್ಯಾತಿಯ ನಟ ನವೀನ್​ ಕೃಷ್ಣ ನಿರ್ದೇಶನ ಮಾಡ್ತಿದ್ದಾರೆ.

 

ಮಹಾತ್ಮರ ಕಥೆ ನೋಡೋದಕ್ಕೆ ವೀಕ್ಷಕರು ಕಾಯ್ತಿದ್ದಾರೆ. ಈ ಹಿಂದೆ ಸ್ಟಾರ್​ ಸುವರ್ಣ ವಾಹಿನಿಯಲ್ಲಿ ಮೂಡಿಬಂದಿದ್ದ ಶ್ರೀ ಗುರು ರಾಘವೇಂದ್ರ ವೈಭವ ಧಾರಾವಾಹಿಯಲ್ಲಿ ನಟ ಪರೀಕ್ಷಿತ್ ಅದ್ಭುತವಾಗಿ ಅಭಿನಯಿಸಿದ್ರು. ಹಲವು ವರ್ಷಗಳ ನಂತರ​ ಮತ್ತೆ ರಾಯರ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆದ್ರೆ, ರಾಯರ ಪಾತ್ರದಲ್ಲಿ ಅಲ್ಲ. ಅವರ ಗುರುಗಳಾದ ವ್ಯಾಸರಾಯರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಇನ್ನೂ, ರಾಯರ ಪಾತ್ರದ ಬ್ಗಗೆ ಸಹಜವಾಗಿಯೇ ಕುತೂಹಲ ಇದೆ. ಯಾರು ಈ ಪಾತ್ರ ಮಾಡ್ತಾರೆ ಅನ್ನೋದೇ ಸದ್ಯದ ಪ್ರಶ್ನೆ. ಸದ್ಯ ರಾಯರ ಶಿಶು ಅವತಾರದ ಪ್ರೋಮೋ ರಿಲೀಸ್​ ಮಾಡಿದೆ ತಂಡ. ಎಲ್ಲವೂ ಅಂದುಕೊಂಡಂತೆ ಆಗಿದ್ದರೇ ಮೇ ತಿಂಗಳಿನಲ್ಲಿ ತೆರೆಗೆ ಬರಬೇಕಿತ್ತು.

ಆದ್ರೆ, ಕಾರಣಾಂತರಗಳಿಂದ ರಾಯರು ಬರೋದಕ್ಕೆ ತಡವಾಯ್ತು. ಸದ್ಯ ಹೊಸ ಪ್ರೋಮೋದಲ್ಲಿ ಸೆಪ್ಟಂಬರ್​ 1ರಿಂದ ರಾಯರ ಆಗಮನವಾಗಲಿದೆ ಎಂದು ವಾಹಿನಿ ಅನೌನ್ಸ್​ ಮಾಡಿದೆ. ಇದೇ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ಸದ್ಯ ಭಕ್ತರಂತೂ ರಾಯರ ಕಥೆ ನೋಡೋಲು ಕಾತರದಿಂದ ಕಾಯುತ್ತಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು