ರಾಯರ ಭಕ್ತರಿಗೆ ಶುಭ ಸುದ್ದಿ.. ಶೀಘ್ರದಲ್ಲೇ ಬರಲಿದೆ ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿ !

ಜೀ ಕನ್ನಡ ವಾಹಿನಿಯ ಬಹು ನಿರೀಕ್ಷಿತ ಧಾರಾವಾಹಿ ಶ್ರೀ ರಾಘವೇಂದ್ರ ಮಹಾತ್ಮೆ. ರಾಯರ ಪವಾಡಗಳನ್ನ ಸಾರುವ ಭಕ್ತಿ ಪ್ರಧಾನ ಧಾರಾವಾಹಿ. ರಾಯರ ಆರಾಧಕರಿಗೆ ವಿಭಿನ್ನ ದೃಶ್ಯ ವೈಭವವನ್ನ ಕಟ್ಟಿಕೊಡಲು ಸಜ್ಜಾಗಿದೆ ಜೀ ವಾಹಿನಿ. ಕಥೆ, ನಿರ್ಮಾಣದ ಜವಾಬ್ದಾರಿಯನ್ನ ವಾಹಿನಿಯೇ ಹೊತ್ತಿದ್ದು, ಭೂಮಿಗೆ ಬಂದ ಭಗವಂತ ಖ್ಯಾತಿಯ ನಟ ನವೀನ್​ ಕೃಷ್ಣ ನಿರ್ದೇಶನ ಮಾಡ್ತಿದ್ದಾರೆ.

 

ಮಹಾತ್ಮರ ಕಥೆ ನೋಡೋದಕ್ಕೆ ವೀಕ್ಷಕರು ಕಾಯ್ತಿದ್ದಾರೆ. ಈ ಹಿಂದೆ ಸ್ಟಾರ್​ ಸುವರ್ಣ ವಾಹಿನಿಯಲ್ಲಿ ಮೂಡಿಬಂದಿದ್ದ ಶ್ರೀ ಗುರು ರಾಘವೇಂದ್ರ ವೈಭವ ಧಾರಾವಾಹಿಯಲ್ಲಿ ನಟ ಪರೀಕ್ಷಿತ್ ಅದ್ಭುತವಾಗಿ ಅಭಿನಯಿಸಿದ್ರು. ಹಲವು ವರ್ಷಗಳ ನಂತರ​ ಮತ್ತೆ ರಾಯರ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆದ್ರೆ, ರಾಯರ ಪಾತ್ರದಲ್ಲಿ ಅಲ್ಲ. ಅವರ ಗುರುಗಳಾದ ವ್ಯಾಸರಾಯರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಇನ್ನೂ, ರಾಯರ ಪಾತ್ರದ ಬ್ಗಗೆ ಸಹಜವಾಗಿಯೇ ಕುತೂಹಲ ಇದೆ. ಯಾರು ಈ ಪಾತ್ರ ಮಾಡ್ತಾರೆ ಅನ್ನೋದೇ ಸದ್ಯದ ಪ್ರಶ್ನೆ. ಸದ್ಯ ರಾಯರ ಶಿಶು ಅವತಾರದ ಪ್ರೋಮೋ ರಿಲೀಸ್​ ಮಾಡಿದೆ ತಂಡ. ಎಲ್ಲವೂ ಅಂದುಕೊಂಡಂತೆ ಆಗಿದ್ದರೇ ಮೇ ತಿಂಗಳಿನಲ್ಲಿ ತೆರೆಗೆ ಬರಬೇಕಿತ್ತು.

ಆದ್ರೆ, ಕಾರಣಾಂತರಗಳಿಂದ ರಾಯರು ಬರೋದಕ್ಕೆ ತಡವಾಯ್ತು. ಸದ್ಯ ಹೊಸ ಪ್ರೋಮೋದಲ್ಲಿ ಸೆಪ್ಟಂಬರ್​ 1ರಿಂದ ರಾಯರ ಆಗಮನವಾಗಲಿದೆ ಎಂದು ವಾಹಿನಿ ಅನೌನ್ಸ್​ ಮಾಡಿದೆ. ಇದೇ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ಸದ್ಯ ಭಕ್ತರಂತೂ ರಾಯರ ಕಥೆ ನೋಡೋಲು ಕಾತರದಿಂದ ಕಾಯುತ್ತಿದ್ದಾರೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!