ಬಾರ್ಪೇಟಾ – ದೇಶದಲ್ಲಿ 2029ರ ಸಾರ್ವತ್ರಿಕ ಚುನಾವಣೆ ಯಿಂದ ಮಹಿಳೆಯರಿಗೆ ಸಂಸತ್ತಿನಲ್ಲಿ ಶೇ 33ರಷ್ಟು ಮೀಸಲಾತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ಬಾರ್ಪೇಟಾದಲ್ಲಿ ಸೋಮವಾರ ಚುನಾವಣಾ ರ್ಯಾಲಿಯಲ್ಲಿ ಮಾತ ನಾಡಿದ ಅವರು, ಈ ವಿಷಯ ಕುರಿತು ಚರ್ಚಿಸಲು ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ತಿಳಿಸಿದರು. ಆದರೆ ಕೆಲ ರಾಜಕೀಯ ಪಕ್ಷಗಳು ಮತ್ತು ನಾಯಕರು ಇದರ ಬಗ್ಗೆ ಇಲ್ಲಸಲ್ಲದ ಹವದಂತಿಗಳನ್ನು ಹರಡುತ್ತಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರವನ್ನು ಖಚಿತಪಡಿಸಿಕೊಳ್ಳಲು ಅಸ್ಸಾಂನ ಮಹಿಳೆಯರು ಎಲ್ಲ ಪಕ್ಷಗಳನ್ನು ಒತ್ತಾಯಿಸಬೇಕು ಎಂದು ಮೋದಿ ಆಗ್ರಹಿಸಿದರು.
ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದ ದೇಶದ ನಾಗರಿಕ ಮಗೆ ವಿಶೇಷವಾಗಿ ಬಡವರು, ಮಧ್ಯಮ ವರ್ಗ ಮತ್ತು ರೈತರ ಮೇಲಾಗುವ ದುಷ್ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ವಿರುದ್ಧ ಪ್ರಧಾನಿ ಟೀಕೆ: ನಮ್ಮ ಸರ್ಕಾರವು 2025ರಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ
ಮೇಲೆ ‘ಆಪರೇಷನ್ ಸಿಂಧೂರ’ ನಡೆಸುತ್ತಿದ್ದರೆ. ಕಾಂಗ್ರೆಸ್ನವರು ಪಕ್ಕದ ದೇಶದ ರಾಗಕ್ಕೆ ತಕ್ಕಂತೆ ಹಾಡುತ್ತಿದ್ದರು. 2016ರ ಸರ್ಜಿಕಲ್ ಸ್ಟೈಕ್ ನಡೆಸಿದಾ ಗಲೂ ಕಾಂಗ್ರೆಸ್ ಹಾಗೆಯೇ ವರ್ತಿಸಿತ್ತು ಎಂದು ಪ್ರಧಾನಿ ಮೋದಿ ಅವರು ಕಾಂಗ್ರೆಸ್ ವಿರುದ್ಧ ಕಟುವಾಗಿ ಟೀಕಿಸಿದರು.
ಕಾಂಗ್ರೆಸ್ಗೆ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಇಲ್ಲ ಎಂದು ಆರೋಪಿಸಿದ ಅವರು, ಬಿಜೆಪಿಯು ದೀರ್ಘಾವಧಿ ಬೆಳವಣಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಕೇಂದ್ರೀಕರಿಸಿದೆ, ದಶಕಗಳಿಂದ ಮಾಜಿ ಸೈನಿಕರ ಬೇಡಿಕೆಯಾದ ‘ಒಂದು ಶ್ರೇಣಿ, ಒಂದು ಪಿಂಚಣಿ’ ಯೋಜನೆಯ ಜಾರಿಯನ್ನು ಕಾಂಗ್ರೆಸ್ ನಿರ್ಲಕ್ಷಿಸಿತ್ತು. ಆದರೆ ನಾವು ಅವರ ಬೇಡಿಕೆಗೆ ನ್ಯಾಯ ಒದಗಿಸಿದ್ದೇವೆ. ಇಲ್ಲಿಯವರೆಗೆ ಸೇನಾ ಸಿಬ್ಬಂದಿಯ ಬ್ಯಾಂಕ್ ಖಾತೆಗಳಿಗೆ 1.24 ಲಕ್ಷ ಕೋಟಿ ವಿತರಿಸಿದ್ದೇವೆ ಎಂದು ಪ್ರಧಾನಿ ಮೋದಿ ವಿವರಿಸಿದರು. ಗಾಂಧಿ ಕುಟುಂಬವು ವಂಶ ಪಾರಂಪರ್ಯ ರಾಜಕೀಯ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಅವರು ದೂರಿದರು.
‘ಮೊಹಬ್ಬತ್ ಕಿ ದುಕಾನ್’ ಕಾಂಗ್ರೆಸ್ ನದ್ದು
ರಾಹುಲ್ ಗಾಂಧಿ ಅವರು ‘ಮೊಹಬ್ಬತ್ ಕಿ ದುಕಾನ್’ ಹೇಳಿಕೆಗೆ ಪ್ರತಿಕ್ರಿಯಿಸಿದ ಮೋದಿ, ಕಾಂಗ್ರೆಸ್ನದ್ದು ಸುಳ್ಳಿನ ಅಂಗಡಿ ಆಗಿದೆ ಎಂದು ವ್ಯಂಗ್ಯ ವಾಡಿದ್ದಾರೆ.
ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂ ಗಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಲ್ಲಿ ಅವರು ಚುನಾವಣೆಗೂ ಮುನ್ನ ದೊಡ್ಡ ಭರವಸೆಗಳನ್ನು ನೀಡಿದ್ದರು. ಆದರೆ ಅವುಗಳನ್ನು ಇಲ್ಲಿಯವರೆಗೂ ಈಡೇ ರಿಸಿಲ್ಲ. ಹೀಗಾಗಿ ಕಾಂಗ್ರೆಸ್ನ ಸುಳ್ಳು ಭರವಸೆಗಳಿಗೆ ಬಲಿಯಾಗಬೇಡಿ ಎಂದು ಪ್ರಧಾನಿ ಹೇಳಿದರು.





