ರಸ್ತೆಗಿಳಿಯದ ಸರ್ಕಾರಿ ಬಸ್ ಗಳು : ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ.

38 ತಿಂಗಳ ಬಾಕಿ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು ಹಲವೆಡೆ ಸರ್ಕಾರಿ ಬಸ್ ಗಳ ಸಂಚಾರ ಬಂದ್ ಆಗಿದೆ.

ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಟ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದಲೂ ಬಸ್ ಇಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ ​​ಗಳು ಸಂಚರಿಸುತ್ತಿವೆ. ಏರ್​​ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್​ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.

ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಈ ಮಧ್ಯೆ, ಸರ್ಕಾರದ ಸೂಚನೆ ದೊರೆಯುತ್ತಿದ್ದಂತೆಯೇ ಜಿಲ್ಲೆಗಳ ಸಾರಿಗೆ ನಿಗಮದ ಮುಖ್ಯಸ್ಥರು ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದಾರೆ.

ಪರೀಕ್ಷೆಗಳು ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ತುಮಕೂರು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ತುಮಕೂರು ವಿವಿಯ ಸ್ನಾತಕಪೂರ್ವ ಹಾಗೂ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದೆ.

ಹಾಗೆಯೇ ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದೆ .ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಕೊಪ್ಪಳ ವಿವಿ ಕುಲಪತಿ ಬಿಕೆ ರವಿ ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!