ರಸ್ತೆಗಿಳಿಯದ ಸರ್ಕಾರಿ ಬಸ್ ಗಳು : ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ.

38 ತಿಂಗಳ ಬಾಕಿ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು ಹಲವೆಡೆ ಸರ್ಕಾರಿ ಬಸ್ ಗಳ ಸಂಚಾರ ಬಂದ್ ಆಗಿದೆ.

ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಟ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದಲೂ ಬಸ್ ಇಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ ​​ಗಳು ಸಂಚರಿಸುತ್ತಿವೆ. ಏರ್​​ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್​ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.

ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಈ ಮಧ್ಯೆ, ಸರ್ಕಾರದ ಸೂಚನೆ ದೊರೆಯುತ್ತಿದ್ದಂತೆಯೇ ಜಿಲ್ಲೆಗಳ ಸಾರಿಗೆ ನಿಗಮದ ಮುಖ್ಯಸ್ಥರು ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದಾರೆ.

ಪರೀಕ್ಷೆಗಳು ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ತುಮಕೂರು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ತುಮಕೂರು ವಿವಿಯ ಸ್ನಾತಕಪೂರ್ವ ಹಾಗೂ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆಯಾಗಿದೆ.

ಹಾಗೆಯೇ ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದೆ .ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಕೊಪ್ಪಳ ವಿವಿ ಕುಲಪತಿ ಬಿಕೆ ರವಿ ತಿಳಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!