ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ ಭೈರಪ್ಪ ಅವರ ಕೊಡುಗೆಗಳನ್ನು ಸ್ಮರಿಸಿದರು.

ಬೆಂಗಳೂರು: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್​ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು. ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
ಅಂತಿಮ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಭೈರಪ್ಪ ಅವರ ಪತ್ನಿ ಹಾಗೂ ಮಕ್ಕಳ ಜತೆ ಕುಳಿತುಕೊಂಡು ಮಾತನಾಡಿ ಅವರಿಗೆ ಸಾಂತ್ವನ ಹೇಳಿದರು.

ಎಸ್ಎಲ್ ಭೈರಪ್ಪ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಸದ್ಯ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಅಂತಿಮ ದರ್ಶನ ನಡೆಯುತ್ತಿದ್ದು, ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇದೆ. ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!