ವಿಷ್ಣು ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ ವಶಪಡಿಸಿಕೊಳ್ಳುವಂತೆ ಸರ್ಕಾರದಿಂದ ಪತ್ರ ?

ಬೆಂಗಳೂರು: ವಿವಾದದಿಂದ ಕೂಡಿದ್ದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಅರಣ್ಯ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.

ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಟುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ.

ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮಕ್ಕೆ ಸೇರಿದ ಸರ್ವೇ ನಂ, 26ರಲ್ಲಿ ಅಭಿಮಾನ್ ಸ್ಟುಡಿಯೋಗೆ ಸರ್ಕಾರ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದು ಪಡಿಸಿ ಹಿಂಪಡೆಯುವ ಬಗ್ಗೆ ಅರಣ್ಯ ಇಲಾಖೆ ಪತ್ರದಲ್ಲಿ ಉಲ್ಲೇಖಿಸಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್ ರವೀಂದ್ರಕುಮಾರ್ ಅವರು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?
ಸರ್ಕಾರಿ ಆದೇಶದ ಅನ್ವಯ ಏಪ್ರಿಲ್‌ 09, 1969 ರಂದು 20 ಎಕರೆ ಪ್ರದೇಶವನ್ನು ಟಿ ಎನ್ ಬಾಲಕೃಷ್ಣ ಅವರಿಗೆ ಅಭಿಮಾನ್ ಚಿತ್ರ ಸ್ಟುಡಿಯೋ ಸ್ಥಾಪಿಸುವ ಸಲುವಾಗಿ 20 ವರ್ಷಗಳ ಅವಧಿಗೆ ಗೇಣಿ ಆಧಾರದ ಮೇಲೆ ನೀಡಲಾಗಿತ್ತು. ಸರ್ಕಾರಿ ಆದೇಶದಲ್ಲಿ ಅಭಿಮಾನ್ ಸ್ಟಡಿಯೋ ಅಭಿವೃದ್ಧಿ ಹೊರತಾಗಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸದಿರಲು ಮಾರಾಟ/ ಪರಭಾರೆ ಕೊಡದಿರಲು ಷರತ್ತು ವಿಧಿಸಲಾಗಿತ್ತು.

ಉಲ್ಲಂಘನೆಯಾದಲ್ಲಿ ಮಂಜೂರಾತಿ ರದ್ಧುಪಡಿಸಿ ಭುಮಿಯನ್ನು ಸರ್ಕಾರ ಹಿಂಪಡೆಯಲಾಗುವುದು ಎನ್ನುವ ಆದೇಶ ಸ್ಪಷ್ಟವಾಗಿ ನಮೂದಿಸಲಾಗಿತ್ತು. ಇದನ್ನ ಮನವಿ ಪತ್ರದಲ್ಲಿ ಮತ್ತೆ ಸೂಚಿಸಿ ಅರಣ್ಯ ಇಲಾಖೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಬಾಲಕೃಷ್ಣ ನಿಧನದ ಬಳಿಕ ಅವರ ಮಕ್ಕಳಾದ ಗಣೇಶ್ ಹಾಗೂ ಮೊಮ್ಮಗ ಕಾರ್ತಿಕ್ ಅನಧಿಕೃತವಾಗಿ 10 ಎಕರೆ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ನಮೂದಿಸಲಾಗಿದೆ. ಅಭಿಮಾನ್ ಸ್ಟುಡಿಯೋ ನವೀಕರಣ ಮಾಡುವ ಸಲುವಾಗಿ ಬೇಕಾಗುವ ಹಣಕ್ಕಾಗಿ ಆಸ್ತಿ ಮಾರಾಟಕ್ಕೆ ಅನುಮತಿ ಕೇಳಿ ಮಾರಿದ್ದರು. ಇಲ್ಲಿಯೂ ಉದ್ದೇಶವನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುದಾಗಿ ಪತ್ರದಲ್ಲಿ ಉಲೇಖವಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಬೆಂಗಳೂರು/ದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಮಂಗಳವಾರ (ಮೇ 26) ನಡೆದ ಎಐಸಿಸಿ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗೌರವಯುತವಾಗಿ ನಿರ್ಗಮಿಸಲು 15…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!