ವಿಷ್ಣು ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ ವಶಪಡಿಸಿಕೊಳ್ಳುವಂತೆ ಸರ್ಕಾರದಿಂದ ಪತ್ರ ?

ಬೆಂಗಳೂರು: ವಿವಾದದಿಂದ ಕೂಡಿದ್ದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಅರಣ್ಯ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.

ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಟುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ.

ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮಕ್ಕೆ ಸೇರಿದ ಸರ್ವೇ ನಂ, 26ರಲ್ಲಿ ಅಭಿಮಾನ್ ಸ್ಟುಡಿಯೋಗೆ ಸರ್ಕಾರ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದು ಪಡಿಸಿ ಹಿಂಪಡೆಯುವ ಬಗ್ಗೆ ಅರಣ್ಯ ಇಲಾಖೆ ಪತ್ರದಲ್ಲಿ ಉಲ್ಲೇಖಿಸಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್ ರವೀಂದ್ರಕುಮಾರ್ ಅವರು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?
ಸರ್ಕಾರಿ ಆದೇಶದ ಅನ್ವಯ ಏಪ್ರಿಲ್‌ 09, 1969 ರಂದು 20 ಎಕರೆ ಪ್ರದೇಶವನ್ನು ಟಿ ಎನ್ ಬಾಲಕೃಷ್ಣ ಅವರಿಗೆ ಅಭಿಮಾನ್ ಚಿತ್ರ ಸ್ಟುಡಿಯೋ ಸ್ಥಾಪಿಸುವ ಸಲುವಾಗಿ 20 ವರ್ಷಗಳ ಅವಧಿಗೆ ಗೇಣಿ ಆಧಾರದ ಮೇಲೆ ನೀಡಲಾಗಿತ್ತು. ಸರ್ಕಾರಿ ಆದೇಶದಲ್ಲಿ ಅಭಿಮಾನ್ ಸ್ಟಡಿಯೋ ಅಭಿವೃದ್ಧಿ ಹೊರತಾಗಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸದಿರಲು ಮಾರಾಟ/ ಪರಭಾರೆ ಕೊಡದಿರಲು ಷರತ್ತು ವಿಧಿಸಲಾಗಿತ್ತು.

ಉಲ್ಲಂಘನೆಯಾದಲ್ಲಿ ಮಂಜೂರಾತಿ ರದ್ಧುಪಡಿಸಿ ಭುಮಿಯನ್ನು ಸರ್ಕಾರ ಹಿಂಪಡೆಯಲಾಗುವುದು ಎನ್ನುವ ಆದೇಶ ಸ್ಪಷ್ಟವಾಗಿ ನಮೂದಿಸಲಾಗಿತ್ತು. ಇದನ್ನ ಮನವಿ ಪತ್ರದಲ್ಲಿ ಮತ್ತೆ ಸೂಚಿಸಿ ಅರಣ್ಯ ಇಲಾಖೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಬಾಲಕೃಷ್ಣ ನಿಧನದ ಬಳಿಕ ಅವರ ಮಕ್ಕಳಾದ ಗಣೇಶ್ ಹಾಗೂ ಮೊಮ್ಮಗ ಕಾರ್ತಿಕ್ ಅನಧಿಕೃತವಾಗಿ 10 ಎಕರೆ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ನಮೂದಿಸಲಾಗಿದೆ. ಅಭಿಮಾನ್ ಸ್ಟುಡಿಯೋ ನವೀಕರಣ ಮಾಡುವ ಸಲುವಾಗಿ ಬೇಕಾಗುವ ಹಣಕ್ಕಾಗಿ ಆಸ್ತಿ ಮಾರಾಟಕ್ಕೆ ಅನುಮತಿ ಕೇಳಿ ಮಾರಿದ್ದರು. ಇಲ್ಲಿಯೂ ಉದ್ದೇಶವನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುದಾಗಿ ಪತ್ರದಲ್ಲಿ ಉಲೇಖವಾಗಿದೆ.

Related Posts

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!