ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು : ಸಚಿವ ಎಚ್‌.ಸಿ. ಮಹದೇವಪ್ಪ

ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ನೀಡಿ ಎಂದು ಕೋರಿದ್ದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿದ್ದಾರೆ.

ಸಾಲದು ಎಂಬಂತೆ ಮುರುಗೇಶ್ ನಿರಾಣಿಯವರ ತನಿಖೆಗೆ ಸಂಬಂಧಿಸಿದ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಧೂಳು ಹಿಡಿಯುತ್ತದೆ.
ಪರಿಸ್ಥಿತಿ ಹೀಗಿರುವಾಗ ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯೊಬ್ಬ ನೀಡಿರುವ ದೂರನ್ನು ಆಧರಿಸಿ, ರಾತ್ರೋ ರಾತ್ರಿ ನೋಟಿಸ್ ಜಾರಿ ಮಾಡಿ ಈಗ ತನಿಖೆಗೆ ನೀಡಲು ಹೊರಟಿರುವ ರಾಜ್ಯಪಾಲರು, ತಾರತಮ್ಯದಿಂದ ಮತ್ತು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು ಇವರಿಗೆ ಒಂದು ಕ್ಷಣವೂ ರಾಜ್ಯಪಾಲರಾಗಿ ಮುಂದುವರೆಯುವ ನೈತಿಕತೆ ಇಲ್ಲ.

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ರಾಜಕೀಯ ಪಕ್ಷಗಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಅವರನ್ನು ಮಾನ್ಯ ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!