ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿಎಂ.ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿಎಂ.ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ ನೀಡಿದರು.

ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು…

*ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು.

*ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ.

*ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು.

*ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧನಿಕ‌ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ.

*ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ‌ ತಂತ್ರಜ್ಞಾನದ ನೆರವು ಪಡೆಯಬೇಕು.

*ಬಡಾವಣೆಗಳ ನಿರ್ಮಾಣದಲ್ಲಿ ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಜೊತೆಗೆ ಪಾರ್ಕ್ ಗಳು ವ್ಯವಸ್ಥಿತವಾಗಿರಬೇಕು.

*ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ plan ಮಾಡಿಕೊಳ್ಳಿ.

*ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಿ.

*ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು.

*ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!