ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿಎಂ.ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿಎಂ.ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ ನೀಡಿದರು.

ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು…

*ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು.

*ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ.

*ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು.

*ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧನಿಕ‌ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ.

*ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ‌ ತಂತ್ರಜ್ಞಾನದ ನೆರವು ಪಡೆಯಬೇಕು.

*ಬಡಾವಣೆಗಳ ನಿರ್ಮಾಣದಲ್ಲಿ ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಜೊತೆಗೆ ಪಾರ್ಕ್ ಗಳು ವ್ಯವಸ್ಥಿತವಾಗಿರಬೇಕು.

*ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ plan ಮಾಡಿಕೊಳ್ಳಿ.

*ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಿ.

*ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು.

*ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!