ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್​ ಸಿಗ್ನಲ್​ !

 

2026ನೇ ಸಾಲಿನ ಕರ್ನಾಟಕ ಬಜೆಟ್ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದೆ. ಎಡಿಬಿ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಅಡಿಯಲ್ಲಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್‌ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಉತ್ತೇಜಿಸಲು ಒಂಬತ್ತು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಬೋಧಕ ಸಿಬ್ಬಂದಿಯ ಕೊರತೆ ನೀಗಿಸಲು ಸರ್ಕಾರಿ ಕಾಲೇಜುಗಳಲ್ಲಿ 2,000 ಹುದ್ದೆಗಳನ್ನು ಹಾಗೂ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಒದಗಿಸಲಾಗುವುದು. ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್‌ ಮತ್ತು 3 ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ 31 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲಾಗುವುದು. ರಾಜ್ಯದಾದ್ಯಂತ ಹೊಸ ಕಾಲೇಜುಗಳ ಸ್ಥಾಪನೆ ಮತ್ತು ತಾಂತ್ರಿಕ ಕೋರ್ಸ್‌ಗಳಾದ ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌, ಮಷಿನ್‌ ಲರ್ನಿಂಗ್‌ ಅನ್ನು ಪರಿಚಯಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಗುರಿಯನ್ನು ಬಜೆಟ್ ಹೊಂದಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!