ನಾಳೆ ಸಂಜೆ ಜಿಎಸ್‌ಟಿ ಕೌನ್ಸಿಲ್ ಸಭೆ ತೀರ್ಮಾನ ಪ್ರಕಟ…!

ಎರಡು ದಿನಗಳ ಜಿಎಸ್‌ಟಿ ಕೌನ್ಸಿಲ್ ಸಭೆ ದೆಹಲಿಯಲ್ಲಿ ಇಂದು ಬೆಳಿಗ್ಗೆ ಆರಂಭವಾಗಿದೆ. ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಆರಂಭವಾಗಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಎಲ್ಲ ರಾಜ್ಯಗಳ ಹಣಕಾಸು ಸಚಿವರು ಹಾಗೂ ಅವರ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಕೇಂದ್ರವು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯ ಮಹತ್ವಾಕಾಂಕ್ಷೆಯ ಪರಿಷ್ಕರಣೆಯ ಭಾಗವಾಗಿ ಎಲೆಕ್ಟ್ರಿಕ್ ವಾಹನಗಳ (ಇವಿ) ಮೇಲೆ ಶೇಕಡಾ 5 ರಷ್ಟು ತೆರಿಗೆ ವಿಧಿಸಲು ಒತ್ತಾಯಿಸುವ ಸಾಧ್ಯತೆಯಿದೆ. ಬೆಣ್ಣೆಯಿಂದ ಎಲೆಕ್ಟ್ರಾನಿಕ್ಸ್ ವರೆಗೆ ದಿನನಿತ್ಯ ಬಳಸುವ ವಸ್ತುಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ ಮಾಡಲು ಈ ಸುಧಾರಣೆ ಪ್ರಯತ್ನಿಸುತ್ತದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ ಮಂಡಳಿಯು ಅಧಿವೇಶನದಲ್ಲಿ ಈ ಪ್ರಸ್ತಾವನೆಯ ಕುರಿತು ಚರ್ಚೆ ನಡೆಯಲಿದೆ. ನಾಳೆ ಸಂಜೆ ಸಭೆಯ ಕೊನೆಯಲ್ಲಿ ಅಂತಿಮ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಸದ್ಯ ಇರುವ ಜಿಎಸ್‌ಟಿ ಸ್ಲ್ಯಾಬ್ ಗಳ ಪೈಕಿ ಶೇ.5 ಮತ್ತು ಶೇ.18ರ ಎರಡು ಸ್ಲ್ಯಾಬ್ ಗಳನ್ನು ಮಾತ್ರ ಉಳಿಸಿಕೊಳ್ಳುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತೆ. ದೇಶದ ಮಧ್ಯಮ ವರ್ಗ ಬಳಸುವ ಎಲ್ಲ ಉತ್ಪನ್ನಗಳ ಜಿಎಸ್‌ಟಿ ದರಗಳನ್ನು ಈ ಮೂಲಕವಾಗಿ ಕಡಿಮೆ ಮಾಡಲಾಗುತ್ತೆ. ಜನರಿಗೆ ಜಿಎಸ್‌ಟಿ ತೆರಿಗೆ ಇಳಿಕೆಯ ಲಾಭ ಸಿಗುವಂತೆ ಮಾಡಲು ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತಿದೆ.
ಇನ್ನೂ ಕಾರ್ ಗಳು, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್ , ಲ್ಯಾಪ್ ಟಾಪ್ ಸೇರಿದಂತೆ ಎಲ್ಲ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಜಿಎಸ್‌ಟಿ ದರವು ಕೂಡ ಕಡಿಮೆಯಾಗಲಿದೆ. ಇದರಿಂದಾಗಿ ದೇಶದಲ್ಲರಿ ಆಗಸ್ಟ್ ತಿಂಗಳಲ್ಲಿ ಕಾರ್ ಗಳ ಮಾರಾಟ ಗಣನೀಯವಾಗಿ ಕುಸಿತವಾಗಿದೆ. ಕಾರ್ ಗಳ ಜಿಎಸ್‌ಟಿ ದರ ಕಡಿಮೆಯಾದ ಮೇಲೆ ಕಾರ್ ಖರೀದಿ ಮಾಡೋಣ ಎಂದು ಕಾರ್ ಖರೀದಿಸುವ ಗ್ರಾಹಕರು ಕಾರ್ ಖರೀದಿಯನ್ನು ಸೆಪ್ಟೆಂಬರ್ , ಆಕ್ಟೋಬರ್ ತಿಂಗಳಿಗೆ ಮುಂದೂಡಿದ್ದಾರೆ.

ಇನ್ನೂ ಜಿಎಸ್‌ಟಿ ಸ್ಲ್ಯಾಬ್ ಗಳನ್ನು ಎರಡಕ್ಕೆ ಇಳಿಕೆ ಮಾಡುವುದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 50 ಸಾವಿರ ಕೋಟಿ ರೂಪಾಯಿ ಆದಾಯ ಸಂಗ್ರಹ ನಷ್ಟವಾಗಲಿದೆ. ಆದರೇ, ಉತ್ಪನ್ನಗಳು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವುದರಿಂದ ಹೆಚ್ಚಿನ ಆದಾಯ ಸಂಗ್ರಹವಾಗಬಹುದು, ಉತ್ಪನ್ನಗಳ ಬೇಡಿಕೆ ಹೆಚ್ಚಾಗಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿ ಆರ್ಥಿಕತೆಗೆ ಉತ್ತೇಜನ ಸಿಗಬಹುದು ಎಂಬ ಲೆಕ್ಕಾಚಾರದಲ್ಲಿ ಕೇಂದ್ರ ಸರ್ಕಾರ ಇದೆ.
ಇನ್ನೂ ದೇಶದಲ್ಲಿ ಹೆಲ್ತ್ ಇನ್ಸೂರೆನ್ಸ್ ಮತ್ತು ಟರ್ಮ್ ಇನ್ಸೂರೆನ್ಸ್ , ಲೈಫ್ ಇನ್ಸೂರೆನ್ಸ್ ಗಳ ಮೇಲಿನ ಜಿಎಸ್‌ಟಿ ಯನ್ನು ಶೂನ್ಯಕ್ಕೆ ಇಳಿಸುವ ಸಾಧ್ಯತೆಯೂ ಇದೆ. ಹೆಲ್ತ್ , ಲೈಫ್ ಇನ್ಸೂರೆನ್ಸ್ ಮೇಲಿನ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಸಿದರೇ, ಅದರ ಲಾಭ ಸಂಪೂರ್ಣವಾಗಿ ಗ್ರಾಹಕರಿಗೆ ವರ್ಗಾವಣೆಯಾಗಬೇಕೆಂದು ರಾಜ್ಯ ಸರ್ಕಾರಗಳು ಗ್ಯಾರಂಟಿಯನ್ನು ಕೇಳಿವೆ.

ಏಪ್ರಿಲ್ ನಿಂದ 12 ಲಕ್ಷ ರೂಪಾಯಿವರೆಗಿನ ಗಳಿಕೆಯ ಮೇಲಿನ ಇನ್ ಕಮ್ ಟ್ಯಾಕ್ಸ್ ಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಈಗ ಜಿಎಸ್‌ಟಿ ಸುಧಾರಣೆಯಿಂದ ದೇಶದಲ್ಲಿ 5.31 ಲಕ್ಷ ರೂಪಾಯಿ ಉತ್ಪನ್ನಗಳ ಬಳಕೆ ಅಥವಾ ಅನುಭೋಗಕ್ಕೆ ಉತ್ತೇಜನ ಸಿಗಲಿದೆ. ಇದು ದೇಶದ ಜಿಡಿಪಿಯ ಶೇ.1.6 ರಷ್ಟಾಗುತ್ತೆ ಎಂದು ಎಸ್‌ಬಿಐ ರಿಸರ್ಚ್ ವರದಿ ಹೇಳಿದೆ.
ಇನ್ನೂ ಜಿಎಸ್‌ಟಿ ಸ್ಲ್ಯಾಬ್ ಇಳಿಕೆಯಿಂದ ರಾಜ್ಯ ಸರ್ಕಾರಗಳ ಆದಾಯ ಸಂಗ್ರಹದಲ್ಲಿ ಇಳಿಕೆಯಾಗಬಾರದು. ಬರೀ ಕೆಲ ಕಂಪನಿಗಳಿಗೆ ಮಾತ್ರ ಲಾಭ ಮಾಡಿಕೊಡುವಂತಿರಬಾರದು. ರಾಜ್ಯ ಸರ್ಕಾರಗಳ ಆದಾಯ ನಷ್ಟಕ್ಕೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ, ತಮಿಳುನಾಡು , ಕೇರಳ, ಪಂಜಾಬ್ ಸೇರಿದಂತೆ ಬಿಜೆಪಿಯೇತರ 8 ರಾಜ್ಯ ಸರ್ಕಾರಗಳು ಇಂದಿನ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿವೆ.

Related Posts

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಮರುಜೀವ ನೀಡಿದ್ದು, ರಾಜ್ಯದ ಹಿರಿಯ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ದಿಢೀರ್ ಆದೇಶ ಹೊರಡಿಸಿದೆ. ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ನಡೆದಿರುವ ಈ ಪ್ರಕ್ರಿಯೆಯಲ್ಲಿ, ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಮುಖ ಆಡಳಿತಾತ್ಮಕ ಬದಲಾವಣೆ ತರಲಾಗಿದೆ. ಮೈಸೂರು…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!