ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ!

 

ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.20 ವರ್ಷಗಳ(7300) ದಿನಗಳ ನಂತರ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿ ನೆನಪುಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಅಂದಿನ ಕಾಲದಲ್ಲಿ ವಿದ್ಯೆ ಕಲಿಸಿದ, ಜೈ ಕುಮಾರಸ್ವಾಮಿ(ಜೆಕೆಎಸ್) ಸದಾಶಿವ(ಜಿಸಿಎಸ್) ಬಸವಣ್ಣ(ಬಿಎಂಬಿ) ಕುಮಾರಸ್ವಾಮಿ (ಕೆಎಸ್) ವೆಂಕಟೇಶ್(ವಿಕೆ) ಭೈರವೇಶ್ವರ, ಅಟೆಂಡರ್ ಮಹದೇವು ಸೇರಿದಂತೆ ಸುಮಾರು 8 ಮಂದಿ ಹಿರಿಯ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ, ಗುರುವಂದನೆ ಸಲ್ಲಿಸಲಾಯಿತು. ತಮ್ಮ ಶಿಷ್ಯಂದಿರು ಇಂದು ಸಮಾಜದ ವಿವಿಧ ಸ್ತರಗಳಲ್ಲಿ ಗುರುತಿಸಿಕೊಂಡಿರುವುದನ್ನು ಕಂಡು ಶಿಕ್ಷಕರು ಭಾವುಕರಾದರು.

ಈ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ನೀಡಿದರು.ಕಾರ್ಯಕ್ರಮದ ಉದ್ದಕ್ಕೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಪ್ರೀತಿ, ಗೌರವದ ಮಧುರ ಬಾಂಧವ್ಯ ಮೇಳೈಸಿತ್ತು. ಶಿಕ್ಷಕರು ವಿದ್ಯಾರ್ಥಿಗಳನ್ನು ಹರಸುತ್ತಾ ಆಡಿದ ಮಾತುಗಳು ಎಲ್ಲರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದವು. ಇಡೀ ವಾತಾವರಣವು ಭಾವೋದ್ವೇಗ ಹಾಗೂ ಸಂತಸದಿಂದ ಕೂಡಿತ್ತು.ಸನ್ಮಾನ ಸ್ವೀಕರಿಸಿದ ಹಿರಿಯ ಶಿಕ್ಷಕರು ಮಾತನಾಡಿ, “ವಿದ್ಯಾರ್ಥಿಗಳು ಇಷ್ಟು ವರ್ಷಗಳ ನಂತರವೂ ನಮ್ಮನ್ನು ನೆನಪಿಟ್ಟುಕೊಂಡು ಗೌರವಿಸುತ್ತಿರುವುದು ಜೀವನದ ಅತ್ಯಂತ ಹೆಮ್ಮೆಯ ಕ್ಷಣ,” ಎಂದು ಹರ್ಷ ವ್ಯಕ್ತಪಡಿಸಿದರು.

ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರುಗಳ ಪಾದಕ್ಕೆ ನಮಸ್ಕರಿಸಿ ಆಶೀರ್ವಾದ ಪಡೆದರು.ಒಟ್ಟಾರೆಯಾಗಿ ಈ ಸ್ನೇಹ ಸಮ್ಮಿಲನವು ಹಳೆಯ ನೆನಪುಗಳನ್ನು ಮೆಲುಕು ಹಾಕುವುದರ ಜೊತೆಗೆ, ಗುರು-ಶಿಷ್ಯರ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮ ಆಯೋಜಿಸಿದ ಪತ್ರಕರ್ತ ಮಹೇಶ್ ಕೆಬ್ಬೆ,ವಿಕಾಸ್, ಶೃತಿ,ಸೋಮಣ್ಣ,ರವಿಶಂಕರ್, ಸೇರಿದಂತೆ ಕೆಲವರಿಗೆ ಸಹಪಾಠಿಗಳೇ ಸನ್ಮಾನಿಸಿದ್ದು ಅರ್ಥಪೂರ್ಣವಾಗಿತ್ತು.

Related Posts

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯ ಎಂದ ಅಮಿತ್ ಶಾ, ಭವಿಷ್ಯದಲ್ಲಿ ಪರೀಕ್ಷಾ ಅಕ್ರಮ ತಡೆಯಲು ಕಠಿಣ ಸುಧಾರಣೆ ತರುವ ಭರವಸೆ ನೀಡಿದ್ದಾರೆ. ಸರ್ಕಾರದ ಈ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ