ಹಳದಿ ಮಾರ್ಗದ ಮೆಟ್ರೋ ಲೋಕಾರ್ಪಣೆ; ಮೋದಿಗಾಗಿ ಈ ಮಾರ್ಗದ ಮೆಟ್ರೋ ಕೂಡ ಬಂದ್.

ಬೆಂಗಳೂರು: ನಗರದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗ (Namma Metro Yellow Line)ಕ್ಕೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಯೆಲ್ಲೋ ಮಾರ್ಗದ ಮೆಟ್ರೋ ಆರಂಭಿಸುತ್ತಿರುವುದರಿಂದ ಹಸಿರು ಮಾರ್ಗದ ಮೆಟ್ರೋವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ಮೋದಿ ಅವರು ಇಂದು ಆಗಮಿಸುತ್ತಿದ್ದಾರೆ. ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ ಮಾರ್ಗದ ಮೆಟ್ರೋವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರಿಗೆ ಭದ್ರತಾ ದೃಷ್ಟಿಯಿಂದ ಹಸಿರು ಮಾರ್ಗದ ಮೆಟ್ರೋವನ್ನ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು ಮುಗಿದ ಬಳಿಕ ಹಸಿರು ಮಾರ್ಗದ ಮೆಟ್ರೋ ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪ್ರಯಾಣಿಕರು ಸಹಕರಿಸಬೇಕು ಎಂದು ಕೋರಲಾಗಿದೆ.

ನಗರದ ಬಸವನಗುಡಿ ಪೊಲೀಸರ ಮನವಿ ಹಿನ್ನೆಲೆ ಹಸಿರು ಮಾರ್ಗದಲ್ಲಿ ಬರುವಂತಹ 4 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗುತ್ತಿದೆ. ಲಾಲ್ ಬಾಗ್, ಸೌತ್ ಎಂಡ್, ಜಯನಗರ, ಆರ್.ವಿ ರಸ್ತೆಯ ಮೆಟ್ರೋ ಸ್ಟೇಷನ್ಗಳನ್ನು ಭದ್ರತೆ ದೃಷ್ಟಿಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿರುತ್ತದೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೂ ಬಂದ್ ಆಗಿರುತ್ತವೆ. 12 ಗಂಟೆ ನಂತರ ಎಂದಿನಂತೆ ಸಂಚಾರ ಆರಂಭ ಮಾಡಲಾಗುತ್ತದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!