ಮೈಸೂರು :- ಹೆಚ್ ಎಎಲ್ ನಮ್ಮ ರಾಜ್ಯದ ಹೆಮ್ಮೆಯಾಗಿದೆ ಇದನ್ನು ನಿರ್ಮಾಣ ಮಾಡಿರು ವುದೇ ಕನ್ನಡಿಗರು ಜವಾಹರಲಾಲ್ ನೆಹರೂ ಅವರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೆಚ್ ಎಚ್ ಎಲ್ ಅನ್ನು ಕೊಂಡೊಯ್ಯಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವಾರು ರಾಜ್ಯಗಳು ಮನವಿ ಸಲ್ಲಿಸಿವೆ. ಆದರೆ, ಇದನ್ನು ಯಾವುದೇ ಕಾರಣಕ್ಕೂ ಕರ್ನಾಟಕ ದಿಂದ ಹೊರಹೋಗುವುದಕ್ಕೆ ಬಿಡುವುದಿಲ್ಲ ಎಂದರು. ಇಂಥ ಸಂಸ್ಥೆಯು ಇಲ್ಲಿಯೇ ಇರಬೇಕು. ಇದರ ಅಭಿವೃದ್ಧಿಗೆ ಎಲ್ಲಾ ಸೌಕರ್ಯಗಳನ್ನು ಒದಗಿಸಲು ನಾವು ಸಜ್ಜಾಗಿದ್ದೇವೆ ಎಂದು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವವರು ಕೇಂದ್ರದ ಮೇಲೆ ಒತ್ತಡ ಹೇರಬೇಕು. ಕೇಂದ್ರ ಸರ್ಕಾರಕ್ಕೆ ನಾವು ಕೂಡ ಮನವರಿಕೆ ಮಾಡಿಕೊಡುತ್ತೇವೆ ಎಂದರು.
ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದರು. ಈ ಸಭೆಯಲ್ಲಿ ಭಾಗ ವಹಿಸಿ ಕರ್ನಾಟಕದ ಪರವಾಗಿ ಮಾತನಾಡ ಬೇಕಿತ್ತು. ಆದರೆ ಈಗ ಕೇಂದ್ರದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಈಗಾ ಗಲೇ ಗೈರು ಹಾಜರಿ ಬಗ್ಗೆ ಎಲ್ಲಾ ಕಡೆ ಪ್ರಶ್ನಿಸ ಲಾಗಿದೆ ಎಂದು ಯದುವೀರ್ ವಿವರಿಸಿ ದರು. ಕನ್ನಡಿಗರಿಂದ, ಕನ್ನಡಿಗರ ನಾಯಕತ್ವ | ದಲ್ಲಿ ಬೆಳೆದಿರುವ ಈ ಸಂಸ್ಥೆಯನ್ನು ಸಂರಕ್ಷಣೆ ಮಾಡ ಬೇಕು. ಹೆಚ್ ಎಎಲ್ ಕಾರ್ಯಾನೆಯಲ್ಲಿ ನಡೆಯು ತ್ತಿರುವ ಚಟುವಟಿಕೆಗಳು ಮುಂದುವರಿಯಲೇಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಸಂಸದರು ತಿಳಿಸಿದರು.




