ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ*

ಹಾಸನದ 25ರ ಯುವ ಸಾಫ್ಟ್‌ವೇರ್ ಇಂಜಿನಿಯರ್ ಶ್ವೇತಾ ಮೆದುಳಿನಲ್ಲಿ ತೀವ್ರ ರಕ್ತಸ್ರಾವದಿಂದ ಹಠಾತ್ ನಿಧನರಾಗಿದ್ದಾರೆ. ಮನೆಯಲ್ಲಿ ಕುಸಿದುಬಿದ್ದ ನಂತರ ಕೋಮಾಕ್ಕೆ ಜಾರಿದ ಶ್ವೇತಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದರು. ಕುಟುಂಬದಲ್ಲಿ ಈ ಘಟನೆ ಆತಂಕ ಮೂಡಿಸಿದೆ. ಪೋಷಕರು ಅಂಗಾಂಗ ದಾನಕ್ಕೆ ಮುಂದಾದರೂ, ಆರೋಗ್ಯ ಸ್ಥಿತಿಯಿಂದ ಅದು ಸಾಧ್ಯವಾಗಲಿಲ್ಲ.

ಹಾಸನ, ಏ.27: ಸಾಫ್ಟ್‌ವೇರ್ ಇಂಜಿನಿಯರ್ ಹಠಾತ್ ಸಾ*ನ್ನಪ್ಪಿರುವ ಘಟನೆ ನಡೆದಿದೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ 25 ವರ್ಷದ ಯುವತಿ ಶ್ವೇತಾ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಈ ಘಟನೆ ಇಡೀ ಗ್ರಾಮದಲ್ಲಿ ಹಾಗೂ ಕುಟುಂಬಸ್ಥರಲ್ಲಿ ಸೂತಕ ಛಾಯೆ ಆವರಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ(25), ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 25ರ ಶುಕ್ರವಾರ ಸಂಜೆ ಮನೆಯಲ್ಲಿದ್ದಾಗ ಶ್ವೇತಾ ಹಠಾತ್ತಾಗಿ ಕುಸಿದು ಬಿದ್ದಿದ್ದರು.
ಕುಸಿದು ಬಿದ್ದ ತಕ್ಷಣವೇ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ (Brain Hemorrhage) ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾ*ನ್ನಪ್ಪಿದ್ದಾರೆ.
ಮಗಳ ಸಾವಿನ ನೋವಿನ ನಡುವೆಯೂ ಪೋಷಕರು ಶ್ವೇತಾ ಅವರ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದ್ದರು. ಆ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗಲು ಮುಂದಾಗಿದ್ದರು. ಆದರೆ ಆಕೆಯ ದೇಹದ ಆರೋಗ್ಯದ ಸ್ಥಿತಿಗತಿಯಿಂದಾಗಿ ಅಂಗಾಂಗ ದಾನ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ. ಇಂದು ಬಂಡಿಲಕ್ಕನಕೊಪ್ಪಲು ಗ್ರಾಮದಲ್ಲಿ ಯುವತಿಯ ಅಂತ್ಯಕ್ರಿಯೆ ನಡೆಯಲಿದೆ. ತುಂಬು ವಯಸ್ಸಿನ ಮಗಳ ಹಠಾತ್ ಸಾ*ನಿಂದ ಗಂಗಾಧರ್ ಕುಟುಂಬ ಕಂಗಾಲಾಗಿದ್ದು, ಹಸನ್ಮುಖಿ ಯುವತಿಯ ಸಾವಿಗೆ ಮ್ಯಾಗ್ನಾ ಸಾಫ್ಟ್ ಕಂಪನಿಯ ಸಹೋದ್ಯೋಗಿಗಳು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!