ಹಳದಿ ಮಾರ್ಗದ ಮೆಟ್ರೋ ಲೋಕಾರ್ಪಣೆ; ಮೋದಿಗಾಗಿ ಈ ಮಾರ್ಗದ ಮೆಟ್ರೋ ಕೂಡ ಬಂದ್.

ಬೆಂಗಳೂರು: ನಗರದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗ (Namma Metro Yellow Line)ಕ್ಕೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಯೆಲ್ಲೋ ಮಾರ್ಗದ ಮೆಟ್ರೋ ಆರಂಭಿಸುತ್ತಿರುವುದರಿಂದ ಹಸಿರು ಮಾರ್ಗದ ಮೆಟ್ರೋವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ಮೋದಿ ಅವರು ಇಂದು ಆಗಮಿಸುತ್ತಿದ್ದಾರೆ. ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ ಮಾರ್ಗದ ಮೆಟ್ರೋವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರಿಗೆ ಭದ್ರತಾ ದೃಷ್ಟಿಯಿಂದ ಹಸಿರು ಮಾರ್ಗದ ಮೆಟ್ರೋವನ್ನ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು ಮುಗಿದ ಬಳಿಕ ಹಸಿರು ಮಾರ್ಗದ ಮೆಟ್ರೋ ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪ್ರಯಾಣಿಕರು ಸಹಕರಿಸಬೇಕು ಎಂದು ಕೋರಲಾಗಿದೆ.

ನಗರದ ಬಸವನಗುಡಿ ಪೊಲೀಸರ ಮನವಿ ಹಿನ್ನೆಲೆ ಹಸಿರು ಮಾರ್ಗದಲ್ಲಿ ಬರುವಂತಹ 4 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗುತ್ತಿದೆ. ಲಾಲ್ ಬಾಗ್, ಸೌತ್ ಎಂಡ್, ಜಯನಗರ, ಆರ್.ವಿ ರಸ್ತೆಯ ಮೆಟ್ರೋ ಸ್ಟೇಷನ್ಗಳನ್ನು ಭದ್ರತೆ ದೃಷ್ಟಿಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿರುತ್ತದೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೂ ಬಂದ್ ಆಗಿರುತ್ತವೆ. 12 ಗಂಟೆ ನಂತರ ಎಂದಿನಂತೆ ಸಂಚಾರ ಆರಂಭ ಮಾಡಲಾಗುತ್ತದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!