ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.

ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!