ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ!

ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ. ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಮದನ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.


ಎದೆನೋವಿನಿಂದ ಮದನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಮದನ್ ಮೃಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ ಆಗಿದೆ.

ಸಂಪತ್ಕುಮಾರ್ (53), ಸಿ.ಬಿ ವಿರೂಪಾಕ್ಷ (70), ಸಂತೋಷ್ (41), ದೇವಮ್ಮ (72) ಮೃತಪಟ್ಟವರು. ಹಾಸನ ನಗರದ ಕರಿಗೌಡ ಕಾಲೋನಿ ನಿವಾಸಿ ಸಂಪತ್ಕುಮಾರ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕುಟುಂಬಸ್ಥರು ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಂಪತ್ಕುಮಾರ್ ಸಾವನ್ನಪ್ಪಿದ್ದಾರೆ.

 

 

 

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ದುರಂತ
ಸಕಲೇಶಪುರ ತಾಲ್ಲೂಕಿನ, ಬೆಳಗೋಡು ಹೋಬಳಿ ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಬಿ ವಿರೂಪಾಕ್ಷ ಅವರಿಗೆ ಕಳೆದ ರಾತ್ರಿ 11:30ರ ಸುಮಾರಿನಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಕುಟುಂಬಸ್ಥರು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದ್ರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಮಲಗಿದ್ದಲ್ಲೇ ಸಾವು

ಗ್ರಾಪಂ ಸದಸ್ಯ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಆಲೂರು ತಾಲ್ಲೂಕಿನ, ಕಲ್ಲಾರೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ (41) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ. ಬೆಳಗ್ಗೆ ಮೇಲೆಳದಿದ್ದಾಗ ಕುಟುಂಬಸ್ಥರು ನೋಡಿದ್ದು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಿ ಹೃದಯಾಘಾತದಿಂದ ಸಂತೋಷ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸಂತೋಷ್ ಕಾರಗೋಡು ಗ್ರಾ.ಪಂ. ಸದಸ್ಯರಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಚಿಕಿತ್ಸೆ ಪಡೆದು ವಾಪಸ್ ಬರುವಾಗ ಸಾವು
ಮತ್ತೊಂದು ಪ್ರಕರಣದಲ್ಲಿ ಹೃದಯಾಘಾತದಿಂದ ವೃದ್ದೆ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ದೇವಮ್ಮ (72) ಹೃದಯಾಘಾತಕ್ಕೆ ಬಲಿಯಾದ ವೃದ್ದೆ. ದೇವಮ್ಮ ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆನೋವು ಹೆಚ್ಚಾಗುತ್ತಲೇ ಬೆಂಗಳೂರು ಜಯದೇವ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ, ಚಿಕಿತ್ಸೆ, ಔಷಧಿ ಪಡೆದು ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದರು. ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ಸಾಗುವ ಮಾರ್ಗ ಮಧ್ಯೆ ದೇವಮ್ಮ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!