ಕಳೆದ 125 ವರ್ಷಗಳಲ್ಲೇ ಅತ್ಯಧಿಕ ಮಳೆ ಈ ವರ್ಷ: ಏಪ್ರಿಲ್‌ನಿಂದ ಈವರೆಗೆ 67 ಜನ ಸಾ*ವು.

ಬೆಂಗಳೂರು : ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳಲ್ಲೇ ಬಂದುಬಿಟ್ಟಿದೆ. ಇದು ಶತಮಾನದ ಮಳೆ ಅಂತಾ ಹೇಳಲಾಗುತ್ತಿದ್ದು, 60ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಅಕ್ಷರಶಃ ಮರಣ ಮೃದಂಗ ಬಾರಿಸುತ್ತಿದೆ. ಅಷ್ಟೇ ಅಲ್ಲ, ಮತ್ತೆ ಭೂಮಿ ಕುಸಿಯುವ ಭೀತಿ ಶುರುವಾಗಿದೆ. ಗುಡ್ಡಕುಸಿತ ಆಗಬಹುದಾದ ಸ್ಥಳದಲ್ಲಿ ಇರೋರು ಎಚ್ಚರಿಕೆಯಿಂದಿರಿ ಅಂತಾ ಹವಾಮಾನ ಇಲಾಖೆ ಸೂಚಿಸಿದೆ.

ಮಹಾಮಳೆಗೆ ದಕ್ಷಿಣ ಕನ್ನಡ ಅಕ್ಷರಶಃ ತತ್ತರಿಸಿದೆ. ಭೂಕುಸಿತ, ಗೋಡೆ ಕುಸಿತ, ಮಳೆ ಪ್ರವಾಹ ಹೀಗೆ ಒಂದರ ಹಿಂದೊಂದು ಹೊಡೆತ ದಕ್ಷಿಣ ಕನ್ನಡಕ್ಕೆ ಬೀಳುತ್ತಲೇ ಇದೆ. ಭೂಮಿ ಕುಸಿದು ನಾಲ್ವರ ಸಾವು ಬೆನ್ನಲ್ಲೇ ಈಗ ಮತ್ತೆ ಆತಂಕ ಶುರುವಾಗಿದೆ. ಇಂದು ಕೂಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೂ ಇವತ್ತು ರಜೆ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಮಳೆ ಎಚ್ಚರಿಕೆ ನೀಡಿದ ಐಎಂಡಿ


ಇನ್ನು ಭಾರತೀಯ ಹವಾಮಾನ ಇಲಾಖೆ ಪ್ರಕಾರ ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಿಡಿಲು ಗುಡುಗಿನೊಂದಿಗೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಕನ್ನಡದಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಇಂದು ದಿನವಿಡೀ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣಾ ಮಳೆಯಾಗುವ ನಿರೀಕ್ಷೆಯಿದೆ. ಕನಿಷ್ಠ ತಾಪಮಾನ 21.0 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 27.0 ಡಿಗ್ರಿ ಸೆಲ್ಸಿಯಸ್ಗೆ ತಲುಪಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭೂಕುಸಿತಕ್ಕೆ ದಕ್ಷಿಣ ಕನ್ನಡದಲ್ಲಿ ನಾಲ್ವರು ಕೊನೆಯುಸಿರು!
ಮಳೆಯಿಂದಾದ ಅನಾಹುತದಿಂದ ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡದ ಸಮೇತ ಮರಗಳು ಬಿದ್ದು ಮನೆಯಲ್ಲಿದ್ದ ಮೂವರು ಅಸುನೀಗಿದ್ದಾರೆ. ದೇರಳಕಟ್ಟೆ ಬಳಿಯ ಮಂಟೆಪದವು ಎಂಬಲ್ಲಿ ನೌಶಾದ್ ಅನ್ನೋರ ಮನೆಯ ಮೇಲೆ ಗುಡ್ಡ ಕುಸಿದಿದ್ದು, 10 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ.


ರಾಜ್ಯದಲ್ಲಿ 125 ವರ್ಷಗಳಲ್ಲೇ ಅತ್ಯಧಿಕ ಮಳೆ!

ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಳೆ ಶತಮಾನದ ಮಳೆಯಂತೆ. ಇದನ್ನ ಖುದ್ದು ರಾಜ್ಯ ಸರ್ಕಾರದ ಅಧಿಕಾರಿಗಳೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಹೇಳಿದ್ದಾರೆ. 125 ವರ್ಷಗಳಲ್ಲಿ ಮೇ ತಿಂಗಳಲ್ಲಿ ಇಷ್ಟೊಂದು ಮಳೆ ಬಿದ್ದಿದೆ ಅಂತಾ ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಏಪ್ರಿಲ್ನಿಂದ ಈವರೆಗೆ ರಾಜ್ಯದಲ್ಲಿ ಮಳೆ ಅನಾಹುತಗಳಿಗೆ ಬರೋಬ್ಬರಿ 67 ಜನರು ಮೃತಪಟ್ಟಿದ್ದಾರೆ ಅನ್ನೋ ಮಾಹಿತಿಯನ್ನ ಕಂದಾಯ ಇಲಾಖೆ ನೀಡಿದೆ.


ಮಾರ್ಚ್ ನಿಂದ ಮೇ ವರೆಗೆ ಸಾಮಾನ್ಯವಾಗಿ ಪೂರ್ವ ಮುಂಗಾರು ಅವಧಿ ಎಂದು ಪರಿಗಣಿಸಲಾಗುತ್ತದೆ. ಆದರೆ ಈ ವರ್ಷ ಮುಂಗಾರು ಮಳೆ ರಾಜ್ಯಕ್ಕೆ ಸುಮಾರು 10 ದಿನಗಳ ಮುಂಚಿತವಾಗಿ ಪ್ರವೇಶಿಸಿದೆ. ಇದರ ಪರಿಣಾಮವಾಗಿ, ಮೈಸೂರು, ಕೊಡಗು, ಮಂಡ್ಯ ಮತ್ತು ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿದೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!