ಆಗಸ್ಟ್ 26 ರಿಂದ ಜಮ್ಮುಕಾಶ್ಮೀರದಲ್ಲಿ ರಣಭೀಕರ ಮಳೆ.. ಈ ಪ್ರದೇಶಗಳ ನಡುವಿನ 68 ರೈಲುಗಳ ಸಂಚಾರ ರದ್ದು..!

ಶ್ರೀನಗರದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಯಲ್ಲಿ ಜಮ್ಮು ಮತ್ತು ಕತ್ರಾ ರೈಲ್ವೆ ಸ್ಟೇಷನ್​ಗಳಿಂದ ಹೊರಡುವ ಹಾಗೂ ಒಳ ಬರುವಂತಹ 68 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ಭಾರತದ ರೈಲ್ವೆ ಇಲಾಖೆ ಹೇಳಿದೆ. ಸೆಪ್ಟೆಂಬರ್ 30ರ ವರೆಗೆ ರೈಲುಗಳ ಸಂಚಾರ ಕ್ಯಾನ್ಸಲ್ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಜಮ್ಮು ಮತ್ತು ಕತ್ರಾ ರೈಲ್ವೆ ಸ್ಟೇಷನ್​ಗಳಿಂದ ಹೊರಡುವ ಹಾಗೂ ಒಳ ಬರುವ 68 ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಇದರ ಜೊತೆಗೆ 24 ರೈಲುಗಳನ್ನು ಪುನಾರಂಭಿಸಲಾಗಿದೆ. ಜೋರಾದ ಮಳೆ ಹಾಗೂ ಹಠಾತ್ ಪ್ರವಾಹಗಳಿಂದ ರೈಲುಗಳ ಸಂಚಾರ ವೇಳಾಪಟ್ಟಿ ಜೋಡಣೆಯಾಗುತ್ತಿಲ್ಲ. ಹೀಗಾಗಿ ಕಳೆದ 8 ದಿನಗಳಿಂದ ಪಠಣ್​ಕೋಟ್ ಹಾಗೂ ಜಮ್ಮು ವಿಭಾಗದ ಕೆಲವು ಪ್ರದೇಶಗಳ ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ಹೇಳಿದೆ.

ಜಮ್ಮುಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾದ ಮಳೆಯಾಗುತ್ತಿದೆ. ಈಗಾಗಲೇ ಸಾಕಷ್ಟು ಆಸ್ತಿ-ಪಾಸ್ತಿ ಹಾನಿಯಾಗಿದೆ. ಕೆಲವೊಂದು ಕಡೆ ಜೀವ ಹಾನಿ ಕೂಡ ಆಗಿದೆ. ಸೇತುವೆ, ಬ್ರಿಡ್ಜ್​ಗಳು, ರೈಲು ಹಳಿಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಮೊದಲೇ ಕಣಿವೆ ಪ್ರದೇಶವಾಗಿದ್ದರಿಂದ ಸ್ಥಳೀಯರ ಸಂಚಾರಕ್ಕೆ ಹೆಚ್ಚು ಅನಾನುಕೂಲ ಆಗಿದೆ. ಇನ್ನು ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೈಲುಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ನಿಷೇಧ ಮಾಡಲಾಗಿದೆ.

ಆಗಸ್ಟ್ 26 ರಿಂದ ಜಮ್ಮುಕಾಶ್ಮೀರದಲ್ಲಿ ರಣಭೀಕರವಾದ ಮಳೆಯಾಗುತ್ತಿದ್ದು ಜನರು, ಯಾತ್ರಿಕರು, ಕಾರ್ಮಿಕರು ಎಲ್ಲರು ಸಮಸ್ಯೆಗೆ ಸಿಲುಕಿದ್ದಾರೆ. ಮಾತಾ ವೈಷ್ಣೋ ದೇವಿ ಯಾತ್ರಿಕರ ಮೇಲೆ ಗುಡ್ಡ ಕುಸಿದು 34 ಜನರು ಜೀವ ಕಳೆದುಕೊಂಡಿದ್ದರು. ಧಾರಾಕಾರ ಮಳೆಯಿಂದ ಭೂಕುಸಿ, ಪ್ರವಾಹ, ಬೆಟ್ಟಗಳು ಕುಸಿದು ಬೀಳುವಂತಹ ಘಟನೆಗಳು ನಡೆಯುತ್ತಿವೆ. ಇದರಿಂದ ಹಲವೆಡೆ ರೈಲು ಹಳಿಗಳಿಗೂ ಹಾನಿಯಾಗಿದೆ. ಈ ಎಲ್ಲ ದೃಷ್ಟಿಯಲ್ಲಿಟ್ಟುಕೊಂಡು ಸೆಪ್ಟೆಂಬರ್ 30ರ ವರೆಗೆ 68 ರೈಲುಗಳನ್ನು ಕ್ಯಾನ್ಸಲ್ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

Related Posts

World Cup 2025: ಇನ್ನೂ ಆರಂಭವಾಗದ ವಿಶ್ವಕಪ್ ಫೈನಲ್ ; ಮುಂಬೈನಲ್ಲಿ ಭಾರಿ ಮಳೆ

ICC Women’s World Cup 2025 Final: ಮುಂಬೈನಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮಳೆಯಿಂದ ಪಂದ್ಯ ಇದುವರೆಗೂ ಆರಂಭವಾಗಿಲ್ಲ. ಒಂದು ವೇಳೆ ಇಂದು…

ಧಾರಾಕಾರ ಮಳೆಯಿಂದ ಮೂರು ಜಿಲ್ಲೆಗಳಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!

ಇಡೀ ದಿನ ಮಳೆ ಸಾಧ್ಯತೆ; ನಾಳೆ ಬೆಂಗಳೂರು ನಗರದಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಕೊಡಗು ಜಿಲ್ಲೆಯುಲ್ಲಿ ಸುರಿಯುತ್ತಿರುವ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು