ಒಟ್ಟೊಟ್ಟಿಗೆ ನೆರವೇರಿತು ಹಿಂದೂ ಮತ್ತು ಮುಸ್ಲಿಮರ ಸಾಮೂಹಿಕ ವಿವಾಹ; ಗದಗದಲ್ಲಿ ಕೋಮು ಸೌಹಾರ್ದತೆ ಸಂದೇಶ

ಗದಗದಲ್ಲಿ ನಡೆದ ಅಪರೂಪದ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸದಲ್ಲಿ ಒಟ್ಟು 36 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿವೆ. ಬೆಟಗೇರಿ ಅಂಜುಮನ್ ಕಮಿಟಿಯಿಂದ ಆಯೋಜಿಸಲ್ಪಟ್ಟ ಈ ವಿಶೇಷ ಕಾರ್ಯಕ್ರಮ ರಾಜ್ಯಾದ್ಯಂತ ಕೋಮು ಸೌಹಾರ್ದತೆಯ ಸಂದೇಶ ಸಾರಿದೆ. ಪುಟ್ಟರಾಜ್ ಗವಾಯಿಗಳ ಅನುಗ್ರಹದಲ್ಲಿ ನಡೆದ ಈ ಮದುವೆಯು ಬಡವರಿಗೆ ಆರ್ಥಿಕ ಹೊರೆ ತಪ್ಪಿಸುವ ಉದ್ದೇಶ ಹೊಂದಿತ್ತು.
ನಾಡಿನೆಲ್ಲೆಡೆ ಕೋಮು ದಳ್ಳುರಿ ಹೊತ್ತಿ ಉರಿಯುತ್ತಿದೆ. ಜಾತಿ ಜಾತಿಗಳ ಕಲಹ ಶುರುವಾಗಿದೆ. ಆದರೆ ಇತ್ತ ನಡೆದಾಡುವ ದೇವರ ನಾಡಿನಲ್ಲಿ ಹಿಂದೂ-ಮುಸ್ಲಿಂ ಭಾಯಿ ಭಾಯಿ ಬದುಕು ಸಾಗಿಸುತ್ತಿದ್ದಾರೆ. ಲಿಂಗೈಕ್ಯ ಪಂಡಿತ ಪುಟ್ಟರಾಜ್ ಗವಾಯಿಗಳ ನಡೆದಾಡಿದ ನೆಲದಲ್ಲಿ ಹಿಂದೂ-ಮುಸ್ಲಿಂ ಬಾಂಧವರ ಸಾಮೂಹಿಕ ವಿವಾವ ಮಹೋತ್ಸವ ಅದ್ಧೂರಿಯಾಗಿ ನಡೆದದ್ದು, 36 ನವದಂಪತಿಗಳು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಿಂಗೈಕ್ಯ ಪಂಡಿತ ಪುಟ್ಟರಾಜ್ ಗವಾಯಿಗಳು ನಡೆದಾಡಿದ ನೆಲ, ಸಂಗೀತ ಬೀಡು ಗದಗ ನಗರ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ಅಂಜುಮನ್ ಶಾಲೆ‌ ಆವರಣದಲ್ಲಿ ಹಿಂದೂ, ಮುಸ್ಲಿಂ ಜೋಡಿಗಳ ಸಾಮೂಹಿಕ ವಿವಾಹ ಮಹೋತ್ಸವ ಬಹಳ ಅದ್ಧೂರಿಯಾಗಿ ನಡೆದಿದೆ. ಬೆಟಗೇರಿ‌ ಅಂಜುಮನ್ ಕಮಿಟಿ ವತಿಯಿಂದ ಸಾಮೂಹಿಕ ವಿವಾಹ ಮಹೋತ್ಸವ ಆಯೋಜನೆ ಮಾಡಲಾಗಿತ್ತು. ಈ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ 36 ಜೋಡಿಗಳು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿವೆ. 26 ಹಿಂದೂ‌ ಜೋಡಿಗಳು, 10 ಮುಸ್ಲಿಂ ಜೋಡಿಗಳು ಹಸೆಮಣೆ ಏರಿದ್ದಾರೆ. ಆ ಮೂಲಕ ನಾಡಿಗೆ ಕೋಮು ಸೌಹಾರ್ದತೆ ಸಂದೇಶ ಸಾರಿದ್ದಾರೆ.

ಈ ವೇಳೆ ಮಾತನಾಡಿದ ಪುಟ್ಟರಾಜ್ ಗವಾಯಿಗಳ ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು, ಇಂದಿನ ದುಬಾರಿ ಜಗತ್ತಿನಲ್ಲಿ ಮದುವೆಗೆ ಲಕ್ಷಾಂತರ ರೂ ಖರ್ಚು ಮಾಡಲಾಗುತ್ತಿದೆ. ಬಡವರಿಗೆ ಮದುವೆ ಮಾಡುವುದಂದರೆ ಕಷ್ಟದ ಕೆಲಸ. ಆದರೆ ಬೆಟಗೇರಿ ಅಂಜುಮನ್ ಕಮಿಟಿ ಸರ್ವಧರ್ಮಗಳ ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಂಡಿದ್ದು ಖುಷಿಯ ವಿಚಾರ ಎಂದಿದ್ದಾರೆ.
ಬೆಟಗೇರಿ ಅಂಜುಮನ್ ಕಮಿಟಿಯಿಂದ ನವ ಜೋಡಿಗಳಿಗೆ ತಾಳಿ, ಕಾಲುಂಗರ, ಬಟ್ಟೆಗಳು ವಿತರಣೆ ಮಾಡಲಾಗಿದೆ. ಕಮಿಟಿ ಅಧ್ಯಕ್ಷ ಪೀರಸಾಬ್ ಕೌತಾಳ ದಂಪತಿ ನವಜೋಡಿಗಳಿಗೆ ತಾಳಿ, ಕಾಲುಂಗರ ನೀಡಿದರು. ಮದುವೆಗೆ ಅಗಮಿಸಿದ 6-7 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. 10 ಮುಸ್ಲಿಂ ಜೋಡಿಗಳಿಗೆ ಅವರ ಸಂಪ್ರದಾಯದಂತೆ ಮತ್ತು 26 ಹಿಂದೂ ಜೋಡಿಗಳಿಗೆ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಲಾಗಿದೆ. ಪುಟ್ಟರಾಜ್ ಗವಾಯಿಗಳ‌ ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹಾಗೂ ಮುಸ್ಲಿಂ ಧರ್ಮಗುರುಗಳ ಸಾನಿಧ್ಯದಲ್ಲಿ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ ನಡೆಯಿತು.
ಧರ್ಮಗಳ ಮಧ್ಯೆ ನಡೆಯುವ ಗಲಾಟೆ, ಗದ್ದಲಗಳ ಮಧ್ಯೆ ಪುಟ್ಟರಾಜ್ ಗವಾಯಿಗಳು ನಡೆದಾಡಿದ ನೆಲ ಗದಗ ನಗರದಲ್ಲಿ ನಡೆದ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ ದೇಶದಲ್ಲೆಡೆ ಕೋಮು ಸೌಹಾರ್ದತೆ ಸಂದೇಶ ಸಾರಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!