ಹಿರಿಯ ನಟ ವಿಷ್ಣುವರ್ಧನ್ ಪುಣ್ಯಭೂಮಿ ಪುನರ್ ನಿರ್ಮಾಣಕ್ಕೆ ಆಗ್ರಹ – ವಿಷ್ಣು ಸ್ಮಾರಕದ ಮುಂದೆ ಪ್ರತಿಭಟನೆ.

ಮೈಸೂರು : ಹಿರಿಯ ನಟ ವಿಷ್ಣು ವರ್ಧನ್ ಅವರ ಪುಣ್ಯಭೂಮಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಉದ್ದೂರು ಗೇಟ್ ನಲ್ಲಿರುವ ವಿಷ್ಣುವರ್ಧನ್ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ಕನ್ನಡ ಚಲನಚಿತ್ರದ ಮೇರು ನಟರಾದ ಡಾ.ವಿಷ್ಣುವರ್ಧನ್ ಕೇವಲ ಒಬ್ಬ ವ್ಯಕ್ತಿಯಾಗಿರಲಿಲ್ಲ ಒಂದು ದೊಡ್ಡ ಶಕ್ತಿಯಾಗಿದ್ದರು. ಅಂತಹ ವ್ಯಕ್ತಿಯ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ ಪುಣ್ಯಭೂಮಿಯ ಪುನರ್ ನಿರ್ಮಾಣವನ್ನು ರಾಜ್ಯ ಸರ್ಕಾರ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ಕಾನೂನು ಚೌಕಟ್ಟಿನಲ್ಲಿ ಭೂಮಿ ಬೆಲೆಯನ್ನು ನಿಗದಿ ಪಡಿಸಿ ಕರ್ನಾಟಕದ ಅಭಿಮಾನಿಗಳೆಲ್ಲ ಆ ಜಾಗವನ್ನು ಖರೀದಿ ಮಾಡಿ ವಿಷ್ಣುವರ್ಧನ್ ಅವರ ಬೃಹತ್ ದೇವಾ ಲಯವನ್ನು ನಾವುಗಳೆಲ್ಲರೂ, ಕಟ್ಟುತ್ತೇವೆ ಎಂದರು.

ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ.ವಿಷ್ಟು ವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರ್ನಾಟಕಕ್ಕೆ ಗೊತ್ತು, ನಟ ಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದೆ 2009ರಿಂದಲೂ ಸ್ಮಾರಕ ನಿರ್ಮಾಣಕ್ಕಾಗಿ ಕಾನೂನು ಹೋರಾಟಗಳನ್ನು ಅಭಿಮಾನಿ ದೇವರುಗಳು ಮಾಡಿ ಕೊಳ್ಳುತ್ತಲೇ ಬರುತ್ತಿದ್ದೇವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ.

ಕೊನೆಗೂ ಈಗಿರುವ ಸಮಾಧಿ ಸ್ಥಳವನ್ನು ಉಳಿಸಿಕೊಳ್ಳ ಲಾಗದ ಸ್ಥಿತಿಗೆ ರಾಜಕಾರಣಿಗಳು, ಚಿತ್ರನಟರು, ಅಭಿಮಾನಿ ಗಳಾದ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಡಾ.ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಭೂಮಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೂಡಲೇ ಜಾಗದ ಮಾಲೀಕರಿಂದ ಸ್ವಾಧೀನಪಡಿಸಿಕೊಂಡು, ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರ ನೀಡಿ ಸ್ಮಾರಕವನ್ನು ಕಾಪಾಡಿಕೊಳ್ಳಬೇಕು.

ಆ ಸ್ಮಾರಕವನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾ ಗ್ರಾಮವಾಗಿ ಅಭಿವೃದ್ಧಿಪಡಿಸಬೇಕು. ಈ ಸಮಸ್ಯೆ ಬಗೆಹರಿಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಡಿಪಿಕೆ ಪರ ಮೇಶ್, ಮಹದೇವಸ್ವಾಮಿ, ಕೆ.ಪಿ.ರವಿ, ಮಹೇಶ್, ಆಕ್ಟರ್, ಬಸವ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!