ಮೈಸೂರು : ಹಿರಿಯ ನಟ ವಿಷ್ಣು ವರ್ಧನ್ ಅವರ ಪುಣ್ಯಭೂಮಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಉದ್ದೂರು ಗೇಟ್ ನಲ್ಲಿರುವ ವಿಷ್ಣುವರ್ಧನ್ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ಕನ್ನಡ ಚಲನಚಿತ್ರದ ಮೇರು ನಟರಾದ ಡಾ.ವಿಷ್ಣುವರ್ಧನ್ ಕೇವಲ ಒಬ್ಬ ವ್ಯಕ್ತಿಯಾಗಿರಲಿಲ್ಲ ಒಂದು ದೊಡ್ಡ ಶಕ್ತಿಯಾಗಿದ್ದರು. ಅಂತಹ ವ್ಯಕ್ತಿಯ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ ಪುಣ್ಯಭೂಮಿಯ ಪುನರ್ ನಿರ್ಮಾಣವನ್ನು ರಾಜ್ಯ ಸರ್ಕಾರ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ಕಾನೂನು ಚೌಕಟ್ಟಿನಲ್ಲಿ ಭೂಮಿ ಬೆಲೆಯನ್ನು ನಿಗದಿ ಪಡಿಸಿ ಕರ್ನಾಟಕದ ಅಭಿಮಾನಿಗಳೆಲ್ಲ ಆ ಜಾಗವನ್ನು ಖರೀದಿ ಮಾಡಿ ವಿಷ್ಣುವರ್ಧನ್ ಅವರ ಬೃಹತ್ ದೇವಾ ಲಯವನ್ನು ನಾವುಗಳೆಲ್ಲರೂ, ಕಟ್ಟುತ್ತೇವೆ ಎಂದರು.
ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ.ವಿಷ್ಟು ವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರ್ನಾಟಕಕ್ಕೆ ಗೊತ್ತು, ನಟ ಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದೆ 2009ರಿಂದಲೂ ಸ್ಮಾರಕ ನಿರ್ಮಾಣಕ್ಕಾಗಿ ಕಾನೂನು ಹೋರಾಟಗಳನ್ನು ಅಭಿಮಾನಿ ದೇವರುಗಳು ಮಾಡಿ ಕೊಳ್ಳುತ್ತಲೇ ಬರುತ್ತಿದ್ದೇವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ.
ಕೊನೆಗೂ ಈಗಿರುವ ಸಮಾಧಿ ಸ್ಥಳವನ್ನು ಉಳಿಸಿಕೊಳ್ಳ ಲಾಗದ ಸ್ಥಿತಿಗೆ ರಾಜಕಾರಣಿಗಳು, ಚಿತ್ರನಟರು, ಅಭಿಮಾನಿ ಗಳಾದ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಡಾ.ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಭೂಮಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೂಡಲೇ ಜಾಗದ ಮಾಲೀಕರಿಂದ ಸ್ವಾಧೀನಪಡಿಸಿಕೊಂಡು, ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರ ನೀಡಿ ಸ್ಮಾರಕವನ್ನು ಕಾಪಾಡಿಕೊಳ್ಳಬೇಕು.
ಆ ಸ್ಮಾರಕವನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾ ಗ್ರಾಮವಾಗಿ ಅಭಿವೃದ್ಧಿಪಡಿಸಬೇಕು. ಈ ಸಮಸ್ಯೆ ಬಗೆಹರಿಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಡಿಪಿಕೆ ಪರ ಮೇಶ್, ಮಹದೇವಸ್ವಾಮಿ, ಕೆ.ಪಿ.ರವಿ, ಮಹೇಶ್, ಆಕ್ಟರ್, ಬಸವ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.





