ಹಿರಿಯ ನಟ ವಿಷ್ಣುವರ್ಧನ್ ಪುಣ್ಯಭೂಮಿ ಪುನರ್ ನಿರ್ಮಾಣಕ್ಕೆ ಆಗ್ರಹ – ವಿಷ್ಣು ಸ್ಮಾರಕದ ಮುಂದೆ ಪ್ರತಿಭಟನೆ.

ಮೈಸೂರು : ಹಿರಿಯ ನಟ ವಿಷ್ಣು ವರ್ಧನ್ ಅವರ ಪುಣ್ಯಭೂಮಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಉದ್ದೂರು ಗೇಟ್ ನಲ್ಲಿರುವ ವಿಷ್ಣುವರ್ಧನ್ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ಕನ್ನಡ ಚಲನಚಿತ್ರದ ಮೇರು ನಟರಾದ ಡಾ.ವಿಷ್ಣುವರ್ಧನ್ ಕೇವಲ ಒಬ್ಬ ವ್ಯಕ್ತಿಯಾಗಿರಲಿಲ್ಲ ಒಂದು ದೊಡ್ಡ ಶಕ್ತಿಯಾಗಿದ್ದರು. ಅಂತಹ ವ್ಯಕ್ತಿಯ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ ಪುಣ್ಯಭೂಮಿಯ ಪುನರ್ ನಿರ್ಮಾಣವನ್ನು ರಾಜ್ಯ ಸರ್ಕಾರ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ಕಾನೂನು ಚೌಕಟ್ಟಿನಲ್ಲಿ ಭೂಮಿ ಬೆಲೆಯನ್ನು ನಿಗದಿ ಪಡಿಸಿ ಕರ್ನಾಟಕದ ಅಭಿಮಾನಿಗಳೆಲ್ಲ ಆ ಜಾಗವನ್ನು ಖರೀದಿ ಮಾಡಿ ವಿಷ್ಣುವರ್ಧನ್ ಅವರ ಬೃಹತ್ ದೇವಾ ಲಯವನ್ನು ನಾವುಗಳೆಲ್ಲರೂ, ಕಟ್ಟುತ್ತೇವೆ ಎಂದರು.

ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ.ವಿಷ್ಟು ವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರ್ನಾಟಕಕ್ಕೆ ಗೊತ್ತು, ನಟ ಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದೆ 2009ರಿಂದಲೂ ಸ್ಮಾರಕ ನಿರ್ಮಾಣಕ್ಕಾಗಿ ಕಾನೂನು ಹೋರಾಟಗಳನ್ನು ಅಭಿಮಾನಿ ದೇವರುಗಳು ಮಾಡಿ ಕೊಳ್ಳುತ್ತಲೇ ಬರುತ್ತಿದ್ದೇವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ.

ಕೊನೆಗೂ ಈಗಿರುವ ಸಮಾಧಿ ಸ್ಥಳವನ್ನು ಉಳಿಸಿಕೊಳ್ಳ ಲಾಗದ ಸ್ಥಿತಿಗೆ ರಾಜಕಾರಣಿಗಳು, ಚಿತ್ರನಟರು, ಅಭಿಮಾನಿ ಗಳಾದ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಡಾ.ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಭೂಮಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೂಡಲೇ ಜಾಗದ ಮಾಲೀಕರಿಂದ ಸ್ವಾಧೀನಪಡಿಸಿಕೊಂಡು, ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರ ನೀಡಿ ಸ್ಮಾರಕವನ್ನು ಕಾಪಾಡಿಕೊಳ್ಳಬೇಕು.

ಆ ಸ್ಮಾರಕವನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾ ಗ್ರಾಮವಾಗಿ ಅಭಿವೃದ್ಧಿಪಡಿಸಬೇಕು. ಈ ಸಮಸ್ಯೆ ಬಗೆಹರಿಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಡಿಪಿಕೆ ಪರ ಮೇಶ್, ಮಹದೇವಸ್ವಾಮಿ, ಕೆ.ಪಿ.ರವಿ, ಮಹೇಶ್, ಆಕ್ಟರ್, ಬಸವ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!