HMT ವಾಚ್‌ನಲ್ಲಿ ಕನ್ನಡದ ಕಲರವ ,ಈ ವಾಚ್ ನಲ್ಲಿದೆ ಸ್ಪೆಷಲ್ ಲೋಗೋ….

ಸಾಮಾನ್ಯವಾಗಿ ಕೈಗಡಿಯಾರ ಖರೀದಿಸುವಾಗ ಯಾವ ಕಂಪೆನಿಯದ್ದು, ಇದರ ಎಷ್ಟು ಬೆಲೆ ಎಂದು ನೋಡುತ್ತೀರಿ. ಆದರೆ ಈ ರೀತಿಯ ಆಕರ್ಷಕ ವಾಚ್ ನೀವು ನೋಡಿರಲು ಸಾಧ್ಯವೇ ಇಲ್ಲ. ವಿಭಿನ್ನ ಹಾಗೂ ಆಕರ್ಷಕವಾದ ಕೈಗಡಿಯಾರವೊಂದು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ವಾಚ್ ಕನ್ನಡಿಗರನ್ನು ಆಕರ್ಷಿಸಲು ಮುಖ್ಯ ಕಾರಣವೇ ಕನ್ನಡ ಅಂಕಿಗಳು ಹಾಗೂ ಕರ್ನಾಟಕದ ಲಾಂಛನ ಗಂಡಭೇರುಂಡ . ಹೌದು, ಕನ್ನಡಿಗರೊಬ್ಬರು ಕೈಗಡಿಯಾರದ ಫೋಟೋವನ್ನು ಶೇರ್ ಮಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಕೆಲವರಿಗೆ ವಾಚ್ ಖರೀದಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ದುಬಾರಿ ಬೆಲೆಯ ಹಾಗೂ ಯಾರ ಬಳಿಯೂ ಇರದ ವಾಚ್ ಕಲೆಕ್ಷನ್ ಇಟ್ಟುಕೊಂಡಿರುತ್ತಾರೆ. ಯಾವುದೇ ಕೈಗಡಿಯಾರವಿರಲಿ, ಅದರಲ್ಲಿ ಕಂಪೆನಿಯ ಹೆಸರು ಹಾಗೂ 1,2, 3 ಹೀಗೆ ಹನ್ನೆರಡರವರೆಗೂ ಸಂಖ್ಯೆಗಳನ್ನು ಬರೆದಿರುವುದನ್ನು ನೀವು ನೋಡಿರುತ್ತೀರಿ. ಆದರೆ ಹೆಚ್‌ಎಂಟಿ ಕಂಪೆನಿಯ ಈ ವಾಚ್ ಮಾತ್ರ ವಿಭಿನ್ನತೆಯಿಂದಲೇ ಕನ್ನಡಿಗರ ಗಮನ ಸೆಳೆದಿದೆ. ಹೌದು ಕರ್ನಾಟಕ ಸರ್ಕಾರದ ಅಧಿಕೃತ ಲಾಂಛನವಾಗಿರುವ ಗಂಡಭೇರುಂಡ ಹಾಗೂ ಕನ್ನಡ ಅಂಕಿಗಳಿರುವುದೇ ಈ ಕೈಗಡಿಯಾರದ ವಿಶೇಷತೆಯಾಗಿದ್ದು, ಸಾಮಾಜಿಕಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಕೈಗಡಿಯಾರದ ಪೋಟೋ ಕಂಡ ನೆಟ್ಟಿಗರು ಇದು ನಮ್ಮ ಕನ್ನಡದ ಗುರುತಿನ ಪ್ರತೀಕ ಎಂದು ಕಾಮೆಂಟ್ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!