HoneyTrap ಕೇಸ್‌ನ ಟೀಸರ್‌ನಲ್ಲಿ ಬೇರೆಯದ್ದೇ ಕೆಲಸ ಆಗುತ್ತಿದೆ – ನಿಖಿಲ್ ಕುಮಾರಸ್ವಾಮಿ ಆರೋಪ.

ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ನ ಟೀಸರ್ನಲ್ಲಿ ಒಂದು ತೋರಿಸಿ, ಸಿನಿಮಾವನ್ನು ಬೇರೆಯದ್ದೇ ರೀತಿಯಲ್ಲಿ ತೋರಿಸುವ ಕೆಲಸ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಹನಿಟ್ರ್ಯಾಪ್ ಕೇಸ್ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಚಿವರೇ ಸದನದ ಒಳಗೆ ಹನಿಟ್ರ್ಯಾಪ್ ಬಗ್ಗೆ ಆರೋಪ ಮಾಡಿದ್ದರು. ಈಗ ಅವರ ಮಗ ಕೊಲೆ ಕೇಸ್ ಬಗ್ಗೆ ಆರೋಪ ಮಾಡಿದ್ದಾರೆ. ಇದೆಲ್ಲವನ್ನೂ ರಾಜ್ಯದ ಜನರಿಗೆ ಬಿಡುತ್ತೇನೆ. ಮೊದಲು ಸಿನಿಮಾ ಟೀಸರ್ ತೋರಿಸಿದರು. ಆದರೆ ಒಳಗೆ ಸಿನಿಮಾ ಬೇರೆಯೇ ಆಗಿದೆ. ಅದೇನು ಅಂತ ಅವರಿಗೆ ಬಿಡುತ್ತೇನೆ. ಹನಿಟ್ರ್ಯಾಪ್ ಪ್ರಜಾಪ್ರಭುತ್ವಕ್ಕೆ ಮಾರಕ. ವಿಧಾನಸೌಧದಲ್ಲಿ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ. ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ. ಇದು ಸಮಾಜಕ್ಕೆ ಮಾರಕ ಎಂದು ತಿಳಿಸಿದರು.

ಹನಿಟ್ರ್ಯಾಪ್ ಯಾರು ಮಾಡಿದ್ದಾರೆ ಎಂದು ಸರ್ಕಾರ ನಡೆಸುತ್ತಿರುವವರು ಹೇಳಬೇಕು. ಪಾರದರ್ಶಕವಾಗಿ ತನಿಖೆ ಮಾಡಿ ಸರ್ಕಾರ ಹನಿಟ್ರ್ಯಾಪ್ ಬಗ್ಗೆ ಜನರ ಮುಂದೆ ಇಡಲಿ. ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರೇ ಸರ್ಕಾರ ನಡೆಸುತ್ತಿದ್ದಾರೆ. ಅವರೇ ತನಿಖೆ ಮಾಡಿ ಸತ್ಯಾಸತ್ಯಾತೆ ಹೊರಗೆ ಇಡಲಿ ಎಂದು ಆಗ್ರಹಿಸಿದರು.

ಹನಿಟ್ರ್ಯಾಪ್ ಕೇಸ್ನ ತನಿಖೆ ನಿಧಾನವಾಗುತ್ತಿದೆ. ಸರ್ಕಾರ 2 ವರ್ಷಗಳಲ್ಲಿ ವಿರೋಧ ಪಕ್ಷದವರನ್ನ ಮುಗಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿದು ಕೆಲಸ ಮಾಡಿದೆ. ಆದರೆ ಹನಿಟ್ರ್ಯಾಪ್ ಕೇಸ್ನಲ್ಲಿ ಯಾಕೆ ತನಿಖೆ ನಿಧಾನವಾಗುತ್ತಿದೆ. ಸಿಟಿ ರವಿ (CT Ravi) ಕೇಸ್ನಲ್ಲಿ ಅಷ್ಟೊಂದು ಆಸಕ್ತಿವಹಿಸಿ ಏನೇನೋ ಮಾಡಿದರು. ಅವರೇನು ಭಯೋತ್ಪಾದಕರಾ? ಅಷ್ಟೊಂದು ಹೈಡ್ರಾಮಾ ಮಾಡೋಕೆ? ಆದರೆ ಹಾಗೆ ಎಂಎಲ್ಸಿ (MLC) ಒಬ್ಬರನ್ನ ನಡೆಸಿಕೊಂಡಿದ್ದು ಸರಿಯಲ್ಲ. ವಿಪಕ್ಷಗಳನ್ನು ಹಾಗೇ ನಡೆಸಿಕೊಳ್ಳುವವರು, ಸಚಿವರ ಮೇಲೆ ಆರೋಪ ಮಾಡಿದರೆ ಯಾಕೆ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!