HoneyTrap ಕೇಸ್‌ನ ಟೀಸರ್‌ನಲ್ಲಿ ಬೇರೆಯದ್ದೇ ಕೆಲಸ ಆಗುತ್ತಿದೆ – ನಿಖಿಲ್ ಕುಮಾರಸ್ವಾಮಿ ಆರೋಪ.

ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ನ ಟೀಸರ್ನಲ್ಲಿ ಒಂದು ತೋರಿಸಿ, ಸಿನಿಮಾವನ್ನು ಬೇರೆಯದ್ದೇ ರೀತಿಯಲ್ಲಿ ತೋರಿಸುವ ಕೆಲಸ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಹನಿಟ್ರ್ಯಾಪ್ ಕೇಸ್ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಚಿವರೇ ಸದನದ ಒಳಗೆ ಹನಿಟ್ರ್ಯಾಪ್ ಬಗ್ಗೆ ಆರೋಪ ಮಾಡಿದ್ದರು. ಈಗ ಅವರ ಮಗ ಕೊಲೆ ಕೇಸ್ ಬಗ್ಗೆ ಆರೋಪ ಮಾಡಿದ್ದಾರೆ. ಇದೆಲ್ಲವನ್ನೂ ರಾಜ್ಯದ ಜನರಿಗೆ ಬಿಡುತ್ತೇನೆ. ಮೊದಲು ಸಿನಿಮಾ ಟೀಸರ್ ತೋರಿಸಿದರು. ಆದರೆ ಒಳಗೆ ಸಿನಿಮಾ ಬೇರೆಯೇ ಆಗಿದೆ. ಅದೇನು ಅಂತ ಅವರಿಗೆ ಬಿಡುತ್ತೇನೆ. ಹನಿಟ್ರ್ಯಾಪ್ ಪ್ರಜಾಪ್ರಭುತ್ವಕ್ಕೆ ಮಾರಕ. ವಿಧಾನಸೌಧದಲ್ಲಿ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ. ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ. ಇದು ಸಮಾಜಕ್ಕೆ ಮಾರಕ ಎಂದು ತಿಳಿಸಿದರು.

ಹನಿಟ್ರ್ಯಾಪ್ ಯಾರು ಮಾಡಿದ್ದಾರೆ ಎಂದು ಸರ್ಕಾರ ನಡೆಸುತ್ತಿರುವವರು ಹೇಳಬೇಕು. ಪಾರದರ್ಶಕವಾಗಿ ತನಿಖೆ ಮಾಡಿ ಸರ್ಕಾರ ಹನಿಟ್ರ್ಯಾಪ್ ಬಗ್ಗೆ ಜನರ ಮುಂದೆ ಇಡಲಿ. ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರೇ ಸರ್ಕಾರ ನಡೆಸುತ್ತಿದ್ದಾರೆ. ಅವರೇ ತನಿಖೆ ಮಾಡಿ ಸತ್ಯಾಸತ್ಯಾತೆ ಹೊರಗೆ ಇಡಲಿ ಎಂದು ಆಗ್ರಹಿಸಿದರು.

ಹನಿಟ್ರ್ಯಾಪ್ ಕೇಸ್ನ ತನಿಖೆ ನಿಧಾನವಾಗುತ್ತಿದೆ. ಸರ್ಕಾರ 2 ವರ್ಷಗಳಲ್ಲಿ ವಿರೋಧ ಪಕ್ಷದವರನ್ನ ಮುಗಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿದು ಕೆಲಸ ಮಾಡಿದೆ. ಆದರೆ ಹನಿಟ್ರ್ಯಾಪ್ ಕೇಸ್ನಲ್ಲಿ ಯಾಕೆ ತನಿಖೆ ನಿಧಾನವಾಗುತ್ತಿದೆ. ಸಿಟಿ ರವಿ (CT Ravi) ಕೇಸ್ನಲ್ಲಿ ಅಷ್ಟೊಂದು ಆಸಕ್ತಿವಹಿಸಿ ಏನೇನೋ ಮಾಡಿದರು. ಅವರೇನು ಭಯೋತ್ಪಾದಕರಾ? ಅಷ್ಟೊಂದು ಹೈಡ್ರಾಮಾ ಮಾಡೋಕೆ? ಆದರೆ ಹಾಗೆ ಎಂಎಲ್ಸಿ (MLC) ಒಬ್ಬರನ್ನ ನಡೆಸಿಕೊಂಡಿದ್ದು ಸರಿಯಲ್ಲ. ವಿಪಕ್ಷಗಳನ್ನು ಹಾಗೇ ನಡೆಸಿಕೊಳ್ಳುವವರು, ಸಚಿವರ ಮೇಲೆ ಆರೋಪ ಮಾಡಿದರೆ ಯಾಕೆ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!