HoneyTrap ಕೇಸ್‌ನ ಟೀಸರ್‌ನಲ್ಲಿ ಬೇರೆಯದ್ದೇ ಕೆಲಸ ಆಗುತ್ತಿದೆ – ನಿಖಿಲ್ ಕುಮಾರಸ್ವಾಮಿ ಆರೋಪ.

ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ನ ಟೀಸರ್ನಲ್ಲಿ ಒಂದು ತೋರಿಸಿ, ಸಿನಿಮಾವನ್ನು ಬೇರೆಯದ್ದೇ ರೀತಿಯಲ್ಲಿ ತೋರಿಸುವ ಕೆಲಸ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಹನಿಟ್ರ್ಯಾಪ್ ಕೇಸ್ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಚಿವರೇ ಸದನದ ಒಳಗೆ ಹನಿಟ್ರ್ಯಾಪ್ ಬಗ್ಗೆ ಆರೋಪ ಮಾಡಿದ್ದರು. ಈಗ ಅವರ ಮಗ ಕೊಲೆ ಕೇಸ್ ಬಗ್ಗೆ ಆರೋಪ ಮಾಡಿದ್ದಾರೆ. ಇದೆಲ್ಲವನ್ನೂ ರಾಜ್ಯದ ಜನರಿಗೆ ಬಿಡುತ್ತೇನೆ. ಮೊದಲು ಸಿನಿಮಾ ಟೀಸರ್ ತೋರಿಸಿದರು. ಆದರೆ ಒಳಗೆ ಸಿನಿಮಾ ಬೇರೆಯೇ ಆಗಿದೆ. ಅದೇನು ಅಂತ ಅವರಿಗೆ ಬಿಡುತ್ತೇನೆ. ಹನಿಟ್ರ್ಯಾಪ್ ಪ್ರಜಾಪ್ರಭುತ್ವಕ್ಕೆ ಮಾರಕ. ವಿಧಾನಸೌಧದಲ್ಲಿ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ. ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ. ಇದು ಸಮಾಜಕ್ಕೆ ಮಾರಕ ಎಂದು ತಿಳಿಸಿದರು.

ಹನಿಟ್ರ್ಯಾಪ್ ಯಾರು ಮಾಡಿದ್ದಾರೆ ಎಂದು ಸರ್ಕಾರ ನಡೆಸುತ್ತಿರುವವರು ಹೇಳಬೇಕು. ಪಾರದರ್ಶಕವಾಗಿ ತನಿಖೆ ಮಾಡಿ ಸರ್ಕಾರ ಹನಿಟ್ರ್ಯಾಪ್ ಬಗ್ಗೆ ಜನರ ಮುಂದೆ ಇಡಲಿ. ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರೇ ಸರ್ಕಾರ ನಡೆಸುತ್ತಿದ್ದಾರೆ. ಅವರೇ ತನಿಖೆ ಮಾಡಿ ಸತ್ಯಾಸತ್ಯಾತೆ ಹೊರಗೆ ಇಡಲಿ ಎಂದು ಆಗ್ರಹಿಸಿದರು.

ಹನಿಟ್ರ್ಯಾಪ್ ಕೇಸ್ನ ತನಿಖೆ ನಿಧಾನವಾಗುತ್ತಿದೆ. ಸರ್ಕಾರ 2 ವರ್ಷಗಳಲ್ಲಿ ವಿರೋಧ ಪಕ್ಷದವರನ್ನ ಮುಗಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿದು ಕೆಲಸ ಮಾಡಿದೆ. ಆದರೆ ಹನಿಟ್ರ್ಯಾಪ್ ಕೇಸ್ನಲ್ಲಿ ಯಾಕೆ ತನಿಖೆ ನಿಧಾನವಾಗುತ್ತಿದೆ. ಸಿಟಿ ರವಿ (CT Ravi) ಕೇಸ್ನಲ್ಲಿ ಅಷ್ಟೊಂದು ಆಸಕ್ತಿವಹಿಸಿ ಏನೇನೋ ಮಾಡಿದರು. ಅವರೇನು ಭಯೋತ್ಪಾದಕರಾ? ಅಷ್ಟೊಂದು ಹೈಡ್ರಾಮಾ ಮಾಡೋಕೆ? ಆದರೆ ಹಾಗೆ ಎಂಎಲ್ಸಿ (MLC) ಒಬ್ಬರನ್ನ ನಡೆಸಿಕೊಂಡಿದ್ದು ಸರಿಯಲ್ಲ. ವಿಪಕ್ಷಗಳನ್ನು ಹಾಗೇ ನಡೆಸಿಕೊಳ್ಳುವವರು, ಸಚಿವರ ಮೇಲೆ ಆರೋಪ ಮಾಡಿದರೆ ಯಾಕೆ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!