ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳೆಷ್ಟು ?

ಆರು ಜನ ಸರ್ಕಾರಿ ನೌಕರರ ಪೈಕಿ ಒಬ್ಬರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಅನ್ನೋ ಶಾಕಿಂಗ್​​ ಮಾಹಿತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಂಕಿಅಂಶಗಳು ತಿಳಿಸಿವೆ.

ಇಂದು ಆರು ಜನ ಸರ್ಕಾರಿ ನೌಕರರ ಪೈಕಿ ಒಬ್ಬರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಅನ್ನೋ ಶಾಕಿಂಗ್​​ ಮಾಹಿತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಂಕಿಅಂಶಗಳು ತಿಳಿಸಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಖಾಲಿ ಇರೋ 2.84 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲೇಬೇಕಾದ ಒತ್ತಡದಲ್ಲಿದೆ.

ಸದ್ಯ ಸರ್ಕಾರ 5.88 ಲಕ್ಷ ಉದ್ಯೋಗಿಗಳನ್ನು ಹೊಂದಿದ್ದು, ಅವರಲ್ಲಿ 96,844 ಜನರು ಹೊರಗುತ್ತಿಗೆ ಪಡೆದಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೇಳಿದೆ. ಅದ್ರಲ್ಲೂ ವೈದ್ಯಕೀಯ ಶಿಕ್ಷಣ ಇಲಾಖೆಯೇ 15,824 ಹೊರಗುತ್ತಿಗೆ ಪಡೆದ ಉದ್ಯೋಗಿಗಳನ್ನು ಹೊಂದಿದೆ. ಶಿಕ್ಷಣ ಇಲಾಖೆಯಲ್ಲಿ ಹೆಚ್ಚು ಮಂದಿ ಹೊರಗುತ್ತಿಗೆ ನೌಕರರು ಇದ್ದಾರೆ.

9 ತಿಂಗಳು ಸರ್ಕಾರ ನೇಮಕವೇ ಮಾಡಿಲ್ಲ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಆಗೋವರೆಗೂ ಯಾವುದೇ ನೇಮಕಾತಿ ಬೇಡ ಎಂದು ಸರ್ಕಾರ ಈ ಹಿಂದೆ ಆದೇಶಿಸಿತ್ತು. ಹಾಗಾಗಿ ನವೆಂಬರ್ 2024 ರಿಂದ ಆಗಸ್ಟ್ 2025ರ ನಡುವೆ 9 ತಿಂಗಳ ಕಾಲ ಸರ್ಕಾರ ಯಾವುದೇ ಹೊಸ ನೇಮಕಾತಿ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಈಗ ಒಳಮೀಸಲಾತಿ ಜಾರಿ ಮಾಡಿದ್ದು, ಸರ್ಕಾರ ನೇಮಕಾತಿಗೆ ಮುಂದಾಗಿದೆ. ಇದು ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಗುಡ್​ನ್ಯೂಸ್​ ಆಗಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯು 15,376 ಮಂದಿ ಮತ್ತು ಆರೋಗ್ಯ ಇಲಾಖೆ 11,424 ಹೊರಗುತ್ತಿಗೆ ನೌಕರರನ್ನು ಹೊಂದಿದೆ. ಹೊರಗುತ್ತಿಗೆ ನೌಕರರ ವೇತನಕ್ಕಾಗಿ ಸರ್ಕಾರ ಈ ವರ್ಷ 2,273 ಕೋಟಿ ಮೀಸಲಿಟ್ಟಿದೆ. ಒಟ್ಟಾರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರದ ವೇತನ ಬಿಲ್ 85,860 ಕೋಟಿ ರೂ. ತಲುಪಲಿದೆ. ಇದು ಕಳೆದ ವರ್ಷಕ್ಕಿಂತ ಶೇ. 19ರಷ್ಟು ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಹೇಗಾದ್ರೂ ಈ ವರ್ಷದಲ್ಲೇ 96,844 ಹೊರಗುತ್ತಿಗೆ ಉದ್ಯೋಗಿಗಳ ಜಾಗದಲ್ಲಿ ಪರ್ಮನೆಂಟ್​​ ಎಂಪ್ಲಾಯ್​ಗಳ ನೇಮಕಾತಿ ಮಾಡಲು ಸರ್ಕಾರ ನಿರ್ಧರಿಸಿದೆ.

2023ರ ಚುನಾವಣೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಅಧಿಕಾರಕ್ಕೆ ಬಂದ 1 ವರ್ಷದೊಳಗೆ ಎಲ್ಲಾ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. 2023 ಮತ್ತು 2024ರಲ್ಲಿ ಕೆಪಿಎಸ್‌ಸಿ ಮೂಲಕ 1,961 ಖಾಲಿ ಹುದ್ದೆ ಭರ್ತಿ ಮಾಡಿತ್ತು. ಹಾಗೆಯೇ 709 ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು 4,880 ಕಾನ್‌ಸ್ಟೆಬಲ್‌ಗಳನ್ನು ನೇಮಕ ಮಾಡಿಕೊಂಡಿತ್ತು. ಅದಾದ ನಂತರ ಇದುವರೆಗೂ ಯಾವುದೇ ನೇಮಕಾತಿ ಆಗಿಲ್ಲ.

ಈಗ ಸಿದ್ದರಾಮಯ್ಯ ಸರ್ಕಾರ ನೇಮಕಾತಿ ಸ್ಥಗಿತ ಆದೇಶವನ್ನು ತೆಗೆದುಹಾಕಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರ ನೇಮಕಾತಿ ಪ್ರಾರಂಭಿಸಲಿದೆ. ಈ ವರ್ಷ ಕನಿಷ್ಠ 50% ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!