ಭಾರತ ಪ್ರತಿವರ್ಷಅಮೆರಿಕಾಗೆ ಎಷ್ಟು ಲಕ್ಷ ಕೋಟಿ ಮೌಲ್ಯದ ಸರಕುಗಳನ್ನು ರಫ್ತು ಮಾಡುತ್ತದೆ. !

ಭಾರತ ಮತ್ತು ಯುಎಸ್ (India-US) ವ್ಯಾಪಾರ ಸಂಬಂಧದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಈಗಾಗಲೇ ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಉತ್ಪನ್ನಗಳ ಟ್ಯಾರಿಫ್ ಏರಿಕೆ ಮಾಡಿರೋದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಅಮೆರಿಕ ತೆರಿಗೆ ಏರಿಕೆ ನೀತಿ ಜಾರಿಯಾಗಿದೆ.

ಶೇಕಡ 25ರಷ್ಟು ಇದ್ದ ತೆರಿಗೆಯನ್ನ ಮತ್ತೆ ಶೇಕಡ 25ಕ್ಕೆ ಯುಎಸ್ಎ ಏರಿಸಿದೆ. ಈ ಮೂಲಕ ಭಾರತದ ಉತ್ಪನ್ನಗಳಿಗೆ ಟ್ರಂಪ್ ಶೇ.50ರಷ್ಟು ತೆರಿಗೆ ವಿಧಿಸಿದಂತೆ ಆಗಿದೆ. GTRI ವರದಿಯ ಪ್ರಕಾರ, ಅಮೆರಿಕದ ಈ ಕ್ರಮದಿಂದಾಗಿ ಭಾರತದ 5.4 ಲಕ್ಷ ಕೋಟಿ ರೂಪಾಯಿಗಳ ರಫ್ತಿನ ಮೇಲೆ ನೇರ ಪರಿಣಾಮ ಬೀರಲಿದೆ.

ಪ್ರಸ್ತುತ ಭಾರತದ ಆರ್ಥಿಕತೆಯು ಸುಮಾರು 339 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಪ್ರತಿ ವರ್ಷ ಭಾರತ 38 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಮೌಲ್ಯದ ಸರಕುಗಳನ್ನು ವಿದೇಶಗಳಿಗೆ ರಫ್ತು ಮಾಡುತ್ತದೆ. ಇದರಲ್ಲಿ ಅಮೆರಿಕ ಹೆಚ್ಚು ಪಾಲುದಾರ. ಭಾರತವು ಸುಮಾರು 7.65 ಲಕ್ಷ ಕೋಟಿ ರೂ. ಮೌಲ್ಯದ ಸರಕುಗಳನ್ನು ಅಮೆರಿಕಕ್ಕೆ ನೀಡುತ್ತದೆ. ಇದರಲ್ಲಿ ಯಂತ್ರೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, ಔಷಧಗಳು ಮತ್ತು ಆಭರಣಗಳು, ಬಟ್ಟೆಗಳು, ರಾಸಾಯನಿಕಗಳು, ಪೆಟ್ರೋಲಿಯಂ ಉತ್ಪನ್ನಗಳು ಸೇರಿವೆ.

 

ಈಗ ಅಮೆರಿಕ ಶೇಕಡಾ 50 ರಷ್ಟು ಸುಂಕ ವಿಧಿಸಿದೆ. ಇದರರ್ಥ ಭಾರತದಿಂದ ಅಲ್ಲಿಗೆ ಹೋಗುವ ಸರಕುಗಳು ದುಬಾರಿ ಆಗುತ್ತವೆ. ಮತ್ತು ಅವುಗಳಿಗೆ ಬೇಡಿಕೆ ಕಡಿಮೆಯಾಗಬಹುದು. ಆದರೆ ಇದು ಪ್ರತಿಯೊಂದು ವಸ್ತುವಿನ ಮೇಲೆ ಪರಿಣಾಮ ಬೀರಲ್ಲ. ತಜ್ಞರ ಪ್ರಕಾರ, ಬಟ್ಟೆ, ಆಭರಣ, ಪೀಠೋಪಕರಣಗಳು ಮತ್ತು ಸಮುದ್ರಾಹಾರದಂತಹ ಕೆಲವು ವರ್ಗದ ಉತ್ಪನ್ನಗಳ ಮೇಲೆ ಮಾತ್ರ ಪರಿಣಾಮ ಬೀರುತ್ತದೆ.

ಅಮೆರಿಕದಿಂದ ಎಷ್ಟು ಆಮದು ಮಾಡಿಕೊಳ್ತದೆ?
ಅಮೆರಿಕವು ಪ್ರತಿವರ್ಷ ಸುಮಾರು 3.46 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸರಕುಗಳನ್ನು ಭಾರತಕ್ಕೆ ರಫ್ತು ಮಾಡುತ್ತದೆ. ಮುಖ್ಯವಾಗಿ ಕಚ್ಚಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ಕಲ್ಲಿದ್ದಲು, ವಜ್ರಗಳು, ವಿಮಾನ ಮತ್ತು ಬಾಹ್ಯಾಕಾಶ ನೌಕೆಯ ಭಾಗಗಳು ಸೇರಿವೆ. ಅಂದರೆ ಎರಡೂ ದೇಶಗಳ ನಡುವಿನ ವ್ಯಾಪಾರ ಸಂಬಂಧ ಸಾಕಷ್ಟು ಆಳವಾಗಿದೆ ಮತ್ತು ಪರಸ್ಪರರ ಅಗತ್ಯಗಳನ್ನು ಅವಲಂಬಿಸಿದೆ.

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!