ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು!

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಆರ್.ಎಸ್.ಎಸ್.ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ.


ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ ಅವರು ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು.

ಬೆದರಿಕೆಗೆ ಹೆದರುವುದಿಲ್ಲ

ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು ಹೆದರುವುದಿಲ್ಲ. ನಾನೂ ಹೆಸದರುವುದಿಲ್ಲ ಎಂದರು.

ಸಮೀಕ್ಷೆ: ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು.

ಎಲ್ಲ ಶಾಸಕರಿಗೂ ಅನುದಾನ

ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ ಜೆಡಿಎಸ್ ನವರು ನಮ್ಮ ಶಾಸಕರಿಗೆ ಅನುದಾನ ನೀಡಿದ್ದರೇ ? ಎಂದು ಪ್ರಶ್ನಿಸಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ ಎಂದರು.ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿಯವರು ತಾಕತ್ತಿದ್ದರೆ ಆರ್.ಎಸ್.ಎಸ್. ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!