‘ನಾನು ನಿನ್ನ ಮಿಸ್ ಮಾಡಿಕೊಳ್ತೀನಿ’; ಬಿಗ್ ಬಾಸ್​ನಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್

Bigg Boss Kannada Elimination: ಬಿಗ್ ಬಾಸ್ ಕನ್ನಡ ಸೀಸನ್ 12ರ ನಾಲ್ಕನೇ ವಾರ ದೀಪಾವಳಿ ಪ್ರಯುಕ್ತ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಯಿತು. ರಾಶಿಕಾ ಮತ್ತು ಸ್ಪಂದನಾ ಮನೆಯಿಂದ ಹೊರಹೋಗುವವರ ಲಿಸ್ಟ್‌ನಲ್ಲಿದ್ದರು. ಸೂರಜ್ ರಾಶಿಕಾರನ್ನು ಅಪ್ಪಿಕೊಂಡರು. ಕೊನೆಗೆ ಇದು ಪ್ರ್ಯಾಂಕ್ ಎಂದು ತಿಳಿದು ಸ್ಪರ್ಧಿಗಳು ನಿಟ್ಟುಸಿರು ಬಿಟ್ಟರು.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBk 12) ನಾಲ್ಕನೇ ವೀಕೆಂಡ್​ನಲ್ಲಿ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಗಿದೆ. ದೀಪಾವಳಿ ಪ್ರಯುಕ್ತ ಯಾವುದೇ ಎಲಿಮಿನೇಷನ್ ಇರೋದಿಲ್ಲ ಎಂದು ವೀಕ್ಷಕರಿಗೆ ಮೊದಲೇ ತಿಳಿಸಲಾಗಿತ್ತು. ಆದರೆ, ಬಿಗ್ ಬಾಸ್​ನಲ್ಲಿ ಇದ್ದ ಸ್ಪರ್ಧಿಗಳಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ. ಪ್ರ್ಯಾಂಕ್ ಎಲಿಮಿನೇಷನ್​ಗೆ ರಾಶಿಕಾ ಹಾಗೂ ಸ್ಪಂದನಾ ಸೋಮಣ್ಣ ಒಂದು ಕ್ಷಣ ಕಂಗಾಲಾದರು. ಮನೆಯಿಂದ ಹೊರ ಹೊರಟ ರಾಶಿಕಾನ ಸೂರಜ್ ತಬ್ಬಿದ್ದಾರೆ.

ಸೂರಜ್ ಹಾಗೂ ರಾಶಿಕಾ ಮಧ್ಯೆ ಪ್ರೀತಿ ಮೂಡುತ್ತಿರುವುದು ಸ್ಪಷ್ಟವಾಗುತ್ತಿದೆ. ಆದರೆ, ನೋಡುಗರಿಗೆ ಇದು ತುಂಬಾನೇ ನಾಟಕೀಯ ಎನಿಸುತ್ತಿದೆ. ಜನಪ್ರಿಯತೆ ಗಳಿಸಬೇಕು ಎಂಬ ಕಾರಣಕ್ಕೆ ರಾಶಿಕಾ ಅವರು ಈ ರೀತಿಯ ಪ್ರೀತಿ ನಾಟಕ ಮಾಡುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಸುದೀಪ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಹೀಗೆ ಮುಂದುವರಿದರೆ ಆಟ ಶೀಘ್ರವೇ ಕೊನೆ ಆಗುತ್ತದೆ ಎಂದು ರಾಶಿಕಾಗೆ ಸುದೀಪ್ ಬುದ್ಧಿಮಾತು ಹೇಳಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಗ್ ಬಾಸ್ ರಾಶಿಕಾಗೆ ಚಮಕ್ ನೀಡಿದರು. ನಾಮಿನೇಟ್ ಆದವರ ಪೈಕಿ ಧ್ರುವಂತ್, ರಾಶಿಕಾ ಹಾಗೂ ಸ್ಪಂದನಾ ಅವರು ಅಂತಿಮವಾಗಿ ಉಳಿದುಕೊಂಡರು. ಈ ಪೈಕಿ ಧ್ರುವಂತ್ ಸೇವ್ ಆದರು. ಈ ಬೆನ್ನಲ್ಲೇ, ‘ರಾಶಿಕಾ ಹಾಗೂ ಸ್ಪಂದನಾ ನೀವಿನ್ನು ಮನೆಯಿಂದ ಹೊರಡಬಹುದು’ ಎಂದರು. ಇದರಿಂದ ರಾಶಿಕಾ ಹಾಗೂ ಸ್ಪಂದನಾ ಕಣ್ಣೀರು ಹಾಕಲು ಆರಂಭಿಸಿದರು.

ಓಡಿ ಬಂದ ಸೂರಜ್ ಅವರು ರಾಶಿಕಾನ ತಬ್ಬಿಕೊಂಡರು. ಸೂರಜ್​ಗೂ ಇದು ಸಾಕಷ್ಟು ಬೇಸರ ಮೂಡಿಸಿತು. ‘ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಸೂರಜ್ ಹೇಳಿದರು. ಆ ಬಳಿಕ ಮುಖ್ಯದ್ವಾರ ಓಪನ್ ಆದಾಗ, ‘ಎಲಿಮಿನೇಷನ್ ಇರೋದಿಲ್ಲ’ ಎಂಬ ಬೋರ್ಡ್ ಕಂಡು ರಾಶಿಕಾ ಹಾಗೂ ಸ್ಪಂದನಾ ಖುಷಿ ಆದರು. ಈ ವೇಳೆ ಮತ್ತೆ ಓಡೋಡಿ ಬಂದ ಸೂರಜ್ ರಾಶಿಕಾನ ಮತ್ತೆ ತಬ್ಬಿಕೊಂಡರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!