‘ನಾನು ನಿನ್ನ ಮಿಸ್ ಮಾಡಿಕೊಳ್ತೀನಿ’; ಬಿಗ್ ಬಾಸ್​ನಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್

Bigg Boss Kannada Elimination: ಬಿಗ್ ಬಾಸ್ ಕನ್ನಡ ಸೀಸನ್ 12ರ ನಾಲ್ಕನೇ ವಾರ ದೀಪಾವಳಿ ಪ್ರಯುಕ್ತ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಯಿತು. ರಾಶಿಕಾ ಮತ್ತು ಸ್ಪಂದನಾ ಮನೆಯಿಂದ ಹೊರಹೋಗುವವರ ಲಿಸ್ಟ್‌ನಲ್ಲಿದ್ದರು. ಸೂರಜ್ ರಾಶಿಕಾರನ್ನು ಅಪ್ಪಿಕೊಂಡರು. ಕೊನೆಗೆ ಇದು ಪ್ರ್ಯಾಂಕ್ ಎಂದು ತಿಳಿದು ಸ್ಪರ್ಧಿಗಳು ನಿಟ್ಟುಸಿರು ಬಿಟ್ಟರು.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBk 12) ನಾಲ್ಕನೇ ವೀಕೆಂಡ್​ನಲ್ಲಿ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಗಿದೆ. ದೀಪಾವಳಿ ಪ್ರಯುಕ್ತ ಯಾವುದೇ ಎಲಿಮಿನೇಷನ್ ಇರೋದಿಲ್ಲ ಎಂದು ವೀಕ್ಷಕರಿಗೆ ಮೊದಲೇ ತಿಳಿಸಲಾಗಿತ್ತು. ಆದರೆ, ಬಿಗ್ ಬಾಸ್​ನಲ್ಲಿ ಇದ್ದ ಸ್ಪರ್ಧಿಗಳಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ. ಪ್ರ್ಯಾಂಕ್ ಎಲಿಮಿನೇಷನ್​ಗೆ ರಾಶಿಕಾ ಹಾಗೂ ಸ್ಪಂದನಾ ಸೋಮಣ್ಣ ಒಂದು ಕ್ಷಣ ಕಂಗಾಲಾದರು. ಮನೆಯಿಂದ ಹೊರ ಹೊರಟ ರಾಶಿಕಾನ ಸೂರಜ್ ತಬ್ಬಿದ್ದಾರೆ.

ಸೂರಜ್ ಹಾಗೂ ರಾಶಿಕಾ ಮಧ್ಯೆ ಪ್ರೀತಿ ಮೂಡುತ್ತಿರುವುದು ಸ್ಪಷ್ಟವಾಗುತ್ತಿದೆ. ಆದರೆ, ನೋಡುಗರಿಗೆ ಇದು ತುಂಬಾನೇ ನಾಟಕೀಯ ಎನಿಸುತ್ತಿದೆ. ಜನಪ್ರಿಯತೆ ಗಳಿಸಬೇಕು ಎಂಬ ಕಾರಣಕ್ಕೆ ರಾಶಿಕಾ ಅವರು ಈ ರೀತಿಯ ಪ್ರೀತಿ ನಾಟಕ ಮಾಡುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಸುದೀಪ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಹೀಗೆ ಮುಂದುವರಿದರೆ ಆಟ ಶೀಘ್ರವೇ ಕೊನೆ ಆಗುತ್ತದೆ ಎಂದು ರಾಶಿಕಾಗೆ ಸುದೀಪ್ ಬುದ್ಧಿಮಾತು ಹೇಳಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಗ್ ಬಾಸ್ ರಾಶಿಕಾಗೆ ಚಮಕ್ ನೀಡಿದರು. ನಾಮಿನೇಟ್ ಆದವರ ಪೈಕಿ ಧ್ರುವಂತ್, ರಾಶಿಕಾ ಹಾಗೂ ಸ್ಪಂದನಾ ಅವರು ಅಂತಿಮವಾಗಿ ಉಳಿದುಕೊಂಡರು. ಈ ಪೈಕಿ ಧ್ರುವಂತ್ ಸೇವ್ ಆದರು. ಈ ಬೆನ್ನಲ್ಲೇ, ‘ರಾಶಿಕಾ ಹಾಗೂ ಸ್ಪಂದನಾ ನೀವಿನ್ನು ಮನೆಯಿಂದ ಹೊರಡಬಹುದು’ ಎಂದರು. ಇದರಿಂದ ರಾಶಿಕಾ ಹಾಗೂ ಸ್ಪಂದನಾ ಕಣ್ಣೀರು ಹಾಕಲು ಆರಂಭಿಸಿದರು.

ಓಡಿ ಬಂದ ಸೂರಜ್ ಅವರು ರಾಶಿಕಾನ ತಬ್ಬಿಕೊಂಡರು. ಸೂರಜ್​ಗೂ ಇದು ಸಾಕಷ್ಟು ಬೇಸರ ಮೂಡಿಸಿತು. ‘ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಸೂರಜ್ ಹೇಳಿದರು. ಆ ಬಳಿಕ ಮುಖ್ಯದ್ವಾರ ಓಪನ್ ಆದಾಗ, ‘ಎಲಿಮಿನೇಷನ್ ಇರೋದಿಲ್ಲ’ ಎಂಬ ಬೋರ್ಡ್ ಕಂಡು ರಾಶಿಕಾ ಹಾಗೂ ಸ್ಪಂದನಾ ಖುಷಿ ಆದರು. ಈ ವೇಳೆ ಮತ್ತೆ ಓಡೋಡಿ ಬಂದ ಸೂರಜ್ ರಾಶಿಕಾನ ಮತ್ತೆ ತಬ್ಬಿಕೊಂಡರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು