ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ : ಕುಮಾರಸ್ವಾಮಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿರೋ ಘಟನೆ ನಾಗಮಂಗಲದಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅನ್ಯಕೋಮಿನ ಯುವಕರಿಂದ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ.

ಈ ಘಟನೆಯ ಬಗ್ಗೆ ಮಂಡ್ಯ ಸಂಸದ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ.

@INCKarnataka ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ’ ಎಂದು ಹೆಚ್‌.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು