ಐಇಡಿ ಸ್ಫೋಟ: ಡಿಆರ್‌ಜಿ ಜವಾನ ಹುತಾತ್ಮ, ಮೂವರಿಗೆ ಗಾಯ.

ಛತ್ತೀಸ್‌ಗಢ : ಇಂದು ಬೆಳಿಗ್ಗೆ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆಯುತ್ತಿದ್ದ ನಕ್ಸಲ್ ನಿಗ್ರಹ ಕಾರ್ಯಾಚರಣೆಯ ವೇಳೆ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಯೋಧ ದಿನೇಶ್ ನಾಗ್ ಹುತಾತ್ಮರಾಗಿದ್ದಾರೆ.

ಅಧಿಕಾರಿಗಳ ಪ್ರಕಾರ, ದಿನೇಶ್ ನಾಗ್ ಆಕಸ್ಮಿಕವಾಗಿ ಐಇಡಿ ಮೇಲೆ ಕಾಲಿಟ್ಟಿದ್ದು ಸ್ಫೋಟಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ವರದಿಯಾಗಿದೆ.

ಇದೇ ಪ್ರದೇಶದಲ್ಲಿ ಹಿಂದಿನ ಎರಡು ವರ್ಷಗಳಲ್ಲಿ ಹಲವಾರು ಗುಂಡಿನ ಚಕಮಕಿ ಪ್ರಕರಣಗಳು ಸಂಭವಿಸಿವೆ. ನಕ್ಸಲರು ಈ ಭಾಗವನ್ನು ತಮ್ಮ ತರಬೇತಿ ಕೇಂದ್ರವನ್ನಾಗಿ ಬಳಸುತ್ತಿದ್ದು, ಇಲ್ಲಿಯ ಭದ್ರತಾ ಲೋಪಗಳು ತೀವ್ರ ಚಿಂತೆ ಮೂಡಿಸುತ್ತಿವೆ.

ಮಾವೋವಾದಿ ಅತಿವಾದದ ವಿರುದ್ಧ ನಿರಂತರ ಹೋರಾಟ

ಡಿಆರ್‌ಜಿ ಎನ್ನುವುದು ಮಾವೋವಾದಿಗಳ ವಿರುದ್ಧದ ವಿಶೇಷ ಪೊಲೀಸ್ ಪಡೆ. ಈ ಪಟಣದಲ್ಲಿ ಆಂತರಿಕ ಪ್ರದೇಶಗಳ ಬುಡಕಟ್ಟು ಜನರನ್ನು ಮತ್ತು ಶರಣಾದ ನಕ್ಸಲರನ್ನು ಕೂಡ ನೇಮಿಸಲಾಗುತ್ತದೆ. ಈ ಪಡೆ ನಕ್ಸಲ್ ನಿಗ್ರಹದಲ್ಲಿ ಪರಿಣಾಮಕಾರಿ ಪಾತ್ರ ವಹಿಸುತ್ತಿದೆ.

ಈ ವರ್ಷದ ಮೊದಲಿನಿಂದಲೂ ನಕ್ಸಲ್ ದಾಳಿಗಳಲ್ಲಿ 20 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇದಕ್ಕೂ ಮುನ್ನ, 2024ರಲ್ಲಿ ಈ ಸಂಖ್ಯೆ 19 ಆಗಿತ್ತು. ಇತ್ತೀಚೆಗೆ ನಡೆದ ಕಾರ್ಯಾಚರಣೆಗಳಲ್ಲಿ 44 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.

ಜುಲೈ ತಿಂಗಳಲ್ಲಿ ನಕ್ಸಲರು ಇಬ್ಬರು ಶಿಕ್ಷಾ ದೂತರನ್ನು ಕೊಂದಿರುವ ಘಟನೆ ನಡೆದಿತ್ತು. ಅಂದಿನಿಂದ ನಕ್ಸಲರು ಪ್ರೆಷರ್ ಐಇಡಿ ಗಳು ಹಾಕಿ ಭದ್ರತಾ ಪಡೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ.

ಮಾವೋವಾದ ಮುಕ್ತ ಭಾರತಕ್ಕೆ ಸರ್ಕಾರದ ಬದ್ಧತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, “ಮಾವೋವಾದವು ದೇಶದ ಅಭಿವೃದ್ಧಿಗೆ ತಡೆ ಆಗಿದೆ. 2026ರ ಮಾರ್ಚ್ 31ರೊಳಗೆ ಭಾರತವನ್ನು ಮಾವೋವಾದ ಮುಕ್ತಗೊಳಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ನಾರಾಯಣಪುರ, ಬಿಜಾಪುರ ಹಾಗೂ ಸುಕ್ಮಾ ಜಿಲ್ಲೆಗಳಲ್ಲಿ ನಡೆದ ಕಾರ್ಯಾಚರಣೆಗಳಲ್ಲಿ ಹಲವು ಪ್ರಭಾವಿ ಮಾವೋವಾದಿ ನಾಯಕರು ಹತರಾಗಿದ್ದಾರೆ ಅಥವಾ ಶರಣಾಗಿದ್ದಾರೆ. ಇದರಲ್ಲಿ 1.18 ಕೋಟಿ ರೂಪಾಯಿ ಬಹುಮಾನ ಹೊಂದಿದ್ದ 23 ಜನ ಮಾವೋವಾದಿಗಳು ಸುಕ್ಮಾದಲ್ಲಿ ಶರಣಾದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!