ಐಇಡಿ ಸ್ಫೋಟ: ಡಿಆರ್‌ಜಿ ಜವಾನ ಹುತಾತ್ಮ, ಮೂವರಿಗೆ ಗಾಯ.

ಛತ್ತೀಸ್‌ಗಢ : ಇಂದು ಬೆಳಿಗ್ಗೆ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆಯುತ್ತಿದ್ದ ನಕ್ಸಲ್ ನಿಗ್ರಹ ಕಾರ್ಯಾಚರಣೆಯ ವೇಳೆ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಯೋಧ ದಿನೇಶ್ ನಾಗ್ ಹುತಾತ್ಮರಾಗಿದ್ದಾರೆ.

ಅಧಿಕಾರಿಗಳ ಪ್ರಕಾರ, ದಿನೇಶ್ ನಾಗ್ ಆಕಸ್ಮಿಕವಾಗಿ ಐಇಡಿ ಮೇಲೆ ಕಾಲಿಟ್ಟಿದ್ದು ಸ್ಫೋಟಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ವರದಿಯಾಗಿದೆ.

ಇದೇ ಪ್ರದೇಶದಲ್ಲಿ ಹಿಂದಿನ ಎರಡು ವರ್ಷಗಳಲ್ಲಿ ಹಲವಾರು ಗುಂಡಿನ ಚಕಮಕಿ ಪ್ರಕರಣಗಳು ಸಂಭವಿಸಿವೆ. ನಕ್ಸಲರು ಈ ಭಾಗವನ್ನು ತಮ್ಮ ತರಬೇತಿ ಕೇಂದ್ರವನ್ನಾಗಿ ಬಳಸುತ್ತಿದ್ದು, ಇಲ್ಲಿಯ ಭದ್ರತಾ ಲೋಪಗಳು ತೀವ್ರ ಚಿಂತೆ ಮೂಡಿಸುತ್ತಿವೆ.

ಮಾವೋವಾದಿ ಅತಿವಾದದ ವಿರುದ್ಧ ನಿರಂತರ ಹೋರಾಟ

ಡಿಆರ್‌ಜಿ ಎನ್ನುವುದು ಮಾವೋವಾದಿಗಳ ವಿರುದ್ಧದ ವಿಶೇಷ ಪೊಲೀಸ್ ಪಡೆ. ಈ ಪಟಣದಲ್ಲಿ ಆಂತರಿಕ ಪ್ರದೇಶಗಳ ಬುಡಕಟ್ಟು ಜನರನ್ನು ಮತ್ತು ಶರಣಾದ ನಕ್ಸಲರನ್ನು ಕೂಡ ನೇಮಿಸಲಾಗುತ್ತದೆ. ಈ ಪಡೆ ನಕ್ಸಲ್ ನಿಗ್ರಹದಲ್ಲಿ ಪರಿಣಾಮಕಾರಿ ಪಾತ್ರ ವಹಿಸುತ್ತಿದೆ.

ಈ ವರ್ಷದ ಮೊದಲಿನಿಂದಲೂ ನಕ್ಸಲ್ ದಾಳಿಗಳಲ್ಲಿ 20 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇದಕ್ಕೂ ಮುನ್ನ, 2024ರಲ್ಲಿ ಈ ಸಂಖ್ಯೆ 19 ಆಗಿತ್ತು. ಇತ್ತೀಚೆಗೆ ನಡೆದ ಕಾರ್ಯಾಚರಣೆಗಳಲ್ಲಿ 44 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.

ಜುಲೈ ತಿಂಗಳಲ್ಲಿ ನಕ್ಸಲರು ಇಬ್ಬರು ಶಿಕ್ಷಾ ದೂತರನ್ನು ಕೊಂದಿರುವ ಘಟನೆ ನಡೆದಿತ್ತು. ಅಂದಿನಿಂದ ನಕ್ಸಲರು ಪ್ರೆಷರ್ ಐಇಡಿ ಗಳು ಹಾಕಿ ಭದ್ರತಾ ಪಡೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ.

ಮಾವೋವಾದ ಮುಕ್ತ ಭಾರತಕ್ಕೆ ಸರ್ಕಾರದ ಬದ್ಧತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, “ಮಾವೋವಾದವು ದೇಶದ ಅಭಿವೃದ್ಧಿಗೆ ತಡೆ ಆಗಿದೆ. 2026ರ ಮಾರ್ಚ್ 31ರೊಳಗೆ ಭಾರತವನ್ನು ಮಾವೋವಾದ ಮುಕ್ತಗೊಳಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ನಾರಾಯಣಪುರ, ಬಿಜಾಪುರ ಹಾಗೂ ಸುಕ್ಮಾ ಜಿಲ್ಲೆಗಳಲ್ಲಿ ನಡೆದ ಕಾರ್ಯಾಚರಣೆಗಳಲ್ಲಿ ಹಲವು ಪ್ರಭಾವಿ ಮಾವೋವಾದಿ ನಾಯಕರು ಹತರಾಗಿದ್ದಾರೆ ಅಥವಾ ಶರಣಾಗಿದ್ದಾರೆ. ಇದರಲ್ಲಿ 1.18 ಕೋಟಿ ರೂಪಾಯಿ ಬಹುಮಾನ ಹೊಂದಿದ್ದ 23 ಜನ ಮಾವೋವಾದಿಗಳು ಸುಕ್ಮಾದಲ್ಲಿ ಶರಣಾದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!