RCB ಗೆದ್ದರೆ ಆ ದಿನವನ್ನು ‘ಆರ್ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ: ಸಿಎಂಗೆ ಅಭಿಮಾನಿ ಪತ್ರ

ಬೆಳಗಾವಿ : ಪ್ಲೇ ಆಫ್ನಲ್ಲಿ ಪಂಜಾಬ್ಗೆ ಸೋಲುಣಿಸಿದ ಆರ್ಸಿಬಿ ತಂಡ ಭರ್ಜರಿಯಾಗಿ ಫೈನಲ್ಗೆ ಎಂಟ್ರಿಕೊಟ್ಟಿದೆ. 18 ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಭಿಮಾನಿಗಳ ಕಪ್ ಗೆಲುವಿನ ಕನಸಿಗೆ ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ಈ ಬಾರಿ ಟ್ರೋಫಿ ನಮ್ದೇ ಅನ್ನೋ ಮಹಾ ಸಂದೇಶ ರವಾನಿಸಲು ಮುಂದಾಗಿರುವ ಈ ಸಂದರ್ಭದಲ್ಲಿ ಓರ್ವ ಅಭಿಮಾನಿ ಆರ್ಸಿಬಿ ಗೆದ್ದರೆ ಆ ದಿನವನ್ನು ‘ಆರ್ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ ಒಂದು ದಿನ ರಜೆ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

 

ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಆರ್ಸಿಬಿ ಅಭಿಮಾನಿಯಾಗಿದ್ದು, ಆರ್ಸಿಬಿ ಕಪ್ಪು ಗೆದ್ದ ದಿನ ಪ್ರತಿ ವರ್ಷ ರಜೆ ನೀಡಬೇಕು. ಎಲ್ಲಾ ಜಿಲ್ಲೆಯಲ್ಲೂ ಆಚರಣೆ ಮಾಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಆರ್ಸಿಬಿ ಫೈನಲ್ ತಲಪುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪತ್ರದಲ್ಲೇನಿದೆ?


ಐಪಿಎಲ್ ಪಂದ್ಯದಲ್ಲಿ ಒಂದು ವೇಳೆ ಆರ್ಸಿಬಿ ತಂಡ ಫೈನಲ್ಗೆ ಹೋಗಿ ಕಪ್ ಗೆದ್ದರೇ ಆ ದಿನ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ ದಿನವನ್ನು ‘ಕರ್ನಾಟಕ ರಾಜ್ಯ ಆರ್ಸಿಬಿ ಫ್ಯಾನ್ಸ್ ಹಬ್ಬ’ ಅಂತ ಅಧೀಕೃತವಾಗಿ ಘೋಷಿಸಿ ಪ್ರತಿವರ್ಷ ಸರ್ಕಾರ ರಜೆ ನೀಡಬೇಕು. ಏಕೆಂದರೆ ಆರ್ಸಿಬಿ ಫ್ಯಾನ್ಸ್ಗಳ ಬಹುದಿನದ ಕನಸು ನನಸಾಗಲಿದ್ದು, ಕರ್ನಾಟಕ ರಾಜ್ಯೋತ್ಸವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸುತ್ತೇವೋ ಅದೇ ರೀತಿ ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸುವುದಕ್ಕೆ ಕರ್ನಾಟಕ ಸರ್ಕಾರ ಅನುವು ಮಾಡಿಕೊಡಬೇಕೆಂದು ವಿನಂತಿ ಮಾಡಿಕೊಳ್ಳುತ್ತೇವೆ.
ಇದನ್ನು ಕರ್ನಾಟಕ ಸರ್ಕಾರ ಗಣನೀಯವಾಗಿ ತೆಗೆದುಕೊಂಡು ರಜೆ ಮತ್ತು ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸುವುದಕ್ಕೆ ಪರವಾಣಿಗೆ ಕೊಡಬೇಕೆಂದು ಎಲ್ಲಾ ಆರ್ಸಿಬಿ ಫ್ಯಾನ್ಸ್ ಪರವಾಗಿ ಕಳಕಳಿಯ ವಿನಂತಿ ಮಾಡಿಕೊಳ್ಳುತ್ತೇವೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!